ಮಣಿಪುರ ಹಿಂಸಾಚಾರ : ಪ್ರಮುಖ ಸಚಿವರೊಂದಿಗೆ ಮೋದಿ ಸಭೆ

ನವದೆಹಲಿ: 

   ಮಣಿಪುರ ಜನಾಂಗೀಯ ಹಿಂಸಾಚಾರ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ.

   ಇನ್ನೊಂದೆಡೆ ಮಣಿಪುರ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಸಂಸದರು ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸುವ ನಿಟ್ಟನಲ್ಲಿ ವಾಗ್ದಾಳಿ ನಡೆಸುತ್ತಿದ್ದು,  ಸರ್ಕಾರ ಇದರಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದೆ.

   ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮತ್ತು  ಕೇಂದ್ರ ಸಚಿವರಾದ ಪಿಯೂಷ್ ಗೋಯೆಲ್ ಮತ್ತು ಅರ್ಜುನ್ ರಾಮ್ ಮೇಘಾವಲ್ ಅವರೊಂದಿಗೆ ಸಭೆ ನಡೆಸಿದ್ದು, ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರ ಕುರಿತು ಚರ್ಚಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap