ಮತಗಟ್ಟೆ ಅಧಕಾರಿಗಳಿಗೆ ತರಬೇತಿ

ಕೂಡ್ಲಿಗಿ:

       ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸುವುದರೊಂದಿಗೆ, ಮತದಾನ ವೇಳೆ ಚುನಾವಣೆ ಆಯೋಗ ನಿಗದಿ ಮಾಡಿರುವ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಮೋತಿಲಾಲ್ ಕೃಷ್ಣ ನಾಯ್ಕ್ ಹೇಳಿದರು. ಇದೇ 23ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಆಧಿಕಾರಿಗಳಿಗೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

         ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ತಮ್ಮ ತಮ್ಮ ಕರ್ತವ್ಯಗಳ ಬಗ್ಗೆ ತಿಳಿದಿರಬೇಕು. ಅದರಲ್ಲೂ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಹೆಚ್ಚಿನ ಜವಬ್ದಾರಿ ಹೊಂದಿರುತ್ತಾರೆ. ಮತದಾನ ನಡೆಯುವಾಗ ಯಾವುದೇ ಸಮಸ್ಯೆ ಬಂದರೂ ಸೆಕ್ಟರಲ್ ಅಧಿಕಾರಿಗಳನ್ನು ಅಥವಾ ಚುನಾವಣಾ ಅಧಿಕಾರಿಯನ್ನು ಸಂಪರ್ಕಿಸಿದರೆ ತಕ್ಷ ಣ ಸ್ಪಂದಿಸಲಾಗುವುದು ಎಂದು ಹೇಳಿದರು.

        ತಹಶೀಲ್ದಾರ್ ಎಸ್. ಮಹಾಬಲೇಶ್ವರ್ ಮಾತನಾಡಿ, ಚುನಾವಣೆ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸಿಬ್ಬಂದಿಯಲ್ಲಿ ಕೆಲವರು ಈಗಾಗಲೇ ಚುನಾವಣೆ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಆದರೂ ಮತಯಂತ್ರಗಳ ಕಾರ್ಯನಿರ್ವಹಣೆ, ಅಣಕು ಮತದಾನ, ಮತಗಟ್ಟೆಯಲ್ಲಿ ಅನುಸರಿಸಬೇಕಾಡ ವಿಧಾನಗಳು, ನಮೂನೆಗಳನ್ನು ಭರ್ತಿ ಮಾಡುವ ವಿಧಾನಗಳನ್ನು ಸಮರ್ಪಕವಾಗಿ ನಿಭಾಹಿಸಬೇಕು ಎಂದು ತಿಳಿಸಿದರು.

          ಕಾಲೇಜಿನ 10 ಕೊಠಡಿಗಳಲ್ಲಿ ತರಬೇತಿಗೆ ಏರ್ಪಾಡು ಮಾಡಲಾಗಿತ್ತು. 22 ಸೆಕ್ಟರಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೇನರ್‍ಗಳು ತರಬೇತಿ ನೀಡಿದರು. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 286 ಮತಗಟ್ಟೆ ಅಧಿಕಾರಿಗಳು ಹಾಗೂ 285 ಸಹಾಯಕ ಮತಗಟ್ಟೆ ಅಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

         ಇದೇ ಸಂದರ್ಭದಲ್ಲಿ ಕಾಲೇಜು ರಂಗ ಮಂದಿರದಲ್ಲಿ ಮಾದರಿ ಮತಗಟ್ಟೆ ಸ್ಥಾಪನೆ ಮಾಡಲಾಗಿತ್ತು. ಕೊಟ್ಟೂರು ಹಶೀಲ್ದಾರ್ ಅನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಉಮಾದೇವಿ, ಸೆಕ್ಟರ್ ಅಧಿಕಾರಿ ಕೆ. ನಾಗನಗೌಡ, ಚುನವಣಾ ವಿಭಾಗದ ಸಿದ್ದಾರಾಧ್ಯ, ಶಿವಕುಮಾರ್ ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link