ಬೆಂಗಳೂರು:
ಮಹದಾಯಿ ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡಿ ಅದರ ಬದಲು ರಾಜಕೀಯ ಮಾಡಬೇಡಿ ಎಂದು ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಇಂದು ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯದ ಬಗ್ಗೆ ನನಗೇನು ಗೊತ್ತಿಲ್ಲ. ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ವಾರದಲ್ಲೇ ದೊಡ್ಡ ಅಧಿಕಾರಿಗಳ ತಂಡದೊಂದಿಗೆ ಮಹದಾಯಿ ಪ್ರದೇಶಕ್ಕೆ ಭೇಟಿ ನೀಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.
ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಗೋವಾ ಎನ್ಜಿಟಿಗೆ ಹೋಗುವ ವಿಚಾರ ಅಥವಾ ಮುಂದಿನ ಹೋರಾಟದ ಬಗ್ಗೆ ಸಿದ್ಧತೆ ಮಾಡಲಾಗುತ್ತದೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/08/d-k-shivakumar-energy-mini.gif)