ಮಹಾರಾಷ್ಟ್ರ ದಿಢೀರ್​ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ : ಕುಮಾರಸ್ವಾಮಿ

ಬೆಂಗಳೂರು: 

     ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ. ನಮ್ಮ ರಾಜ್ಯದಲ್ಲಿ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

     ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆಯಾಗಿದೆ. ನಿನ್ನೆ ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಬರುತ್ತಾರೋ ಗೊತ್ತಿಲ್ಲ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದರು.

    ರಾಜ್ಯ ಸರ್ಕಾರ ಐಸಿಯುಗೆ ಹೋಗುವ ಕಾಲ ಬರುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣದ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap