ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಿಡಿಸಿದ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದು, ಇದನ್ನು ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅಲ್ಲಗಳೆದಿದ್ದಾರೆ. ತಮ್ಮ ದೂರವಾಣಿ ಕದ್ದಾಲಿಕೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸದೇ ಹೋದರೆ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನನ್ನ ದೂರವಾಣಿ ಕದ್ದಾಲಿಕೆ ಮಾಡಿದ್ದು ನಿಜ. ನೂರಕ್ಕೆ ನೂರರಷ್ಟು ದೂರವಾಣಿ ಕದ್ದಾಲಿಕೆಯಾಗಿದೆ. ಹಿಂದೆ ಇದೇ ರೀತಿ ದೂರವಾಣಿ ಕದ್ದಾಲಿಕೆ ಮಾಡಿದಾಗ ಅದರ ಪರಿಣಾಮ ಏನಾಗಿದೆ ಎಂಬುದು ಗೊತ್ತಿದೆ ಎಂದರು.
ಈ ಕುರಿತು ಡಾ: ಜಿ. ಪರಮೇಶ್ವರ್ ಪ್ರತಿಕ್ರಯಿಸಿ, ಯಾವ ರಾಜಕಾರಣಿಯ ದೂರವಾಣಿಯನ್ನು ಅನಧಿಕೃತವಾಗಿ ಕದ್ದಾಲಿಕೆ ಮಾಡುತ್ತಿಲ್ಲ. ಭಯೋತ್ಪಾದಕರು, ಸಮಾಜ ಕಂಟಕರ ದೂರವಾಣಿಯನ್ನು ಪೊಲೀಸರ ತನಿಖೆಗೆ ಪೂರಕವಾಗಿ ಕದ್ದಾಲಿಸಲಾಗುತ್ತಿದೆ. ಉಳಿದಂತೆ ಯಾವುದೇ ದೂರವಾಣಿ ಕದ್ದಾಲಿಕೆ ನಡೆದಿಲ್ಲ ಎಂದರು.
ಕೆಲ ಅನಧಿಕೃತ ಚಟುವಟಿಕೆ ಮಾಡುವವರ ದೂರವಾಣಿಯನ್ನು ಪೊಲೀಸ್ ಇಲಾಖೆ ಟ್ರ್ಯಾಪ್ ಮಾಡುತ್ತದೆ. ಆದರೆ ಅದು ನಮ್ಮ ಗಮನಕ್ಕೂ ಬರುವುದಿಲ್ಲ. ಯಡಿಯೂರಪ್ಪ ಆರೋಪ ಆಧಾರ ರಹಿತ.
ಬಾಗಲಕೋಟೆಯಿಂದ ಹುಬ್ಬಳ್ಳಿಗೆ ತೆರಳುವ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನನ್ನ ದೂರವಾಣಿ ಕದ್ದಾಲಿಕೆ ಆಗುತ್ತಿಲ್ಲ. ಫೋನ್ ಕದ್ದಾಲಿಕೆ ಆಗಿದೆ ಎಂದು ಹೇಳಿದವರು ಯಾರು ಎಂದು ಪ್ರಶ್ನಿಸಿದರು. ದೂರವಾಣಿ ಕದ್ದಾಲಿಕೆ ಆಗಿದೆ ಎಂದು ಯಾರು ಹೇಳಿದ್ದು, ಈ ಬಗ್ಗೆ ಅವರನ್ನೇ ಕೇಳಿ ಎಂದು ಯಡಿಯೂರಪ್ಪಗೆ ಅವರಿಗೆ ತಿರುಗೇಟು ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/08/news-24-bsy-yeddyurappa.gif)