ಬೆಂಗಳೂರು:
ಯಶವಂತಪುರ ಕ್ಷೇತ್ರದಲ್ಲಿನ ಕುಡಿಯುವ ನೀರಿಗಾಗಿ 7.63 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದಿದೆ.
ಯಶವಂತಪುರ ಕ್ಷೇತ್ರಕ್ಕೆ ಅನುದಾನ ಒದಗಿಸೋ ಸಂಬಂಧ ಶಾಸಕ ಎಸ್.ಟಿ ಸೋಮಶೇಖರ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅನುದಾನಕ್ಕೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಕ್ಷೇತ್ರಕ್ಕೆ ಬರೋಬ್ಬರಿ 7.63 ಕೋಟಿ ಬಿಡುಗಡೆ ಮಾಡಲಾಗಿದೆ.
ಮತ್ತೊಂದೆಡೆ ಉಪ ಮುಖ್ಯಮಂತ್ರಿ ಕೂಡ ಇದೇ ಯಶವಂತಪುರ ಕ್ಷೇತ್ರಕ್ಕೆ ರೌಂಡ್ಸ್ ಗೆ ತೆರಳಿದ್ದಾರೆ. ಶಾಸಕ ಎಸ್.ಟಿ ಸೋಮಶೇಖರ್ ಅವರ ಮನವಿಯ ಮೇರೆಗೆ ಭೇಟಿ ನೀಡುತ್ತಿರೋದಾಗಿ ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತೊರೆದು ಶೀಘ್ರವೇ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೇ ನಿನ್ನೆಯಷ್ಟೇ ಅವರ ಬಿಜೆಪಿ ಬೆಂಬಲಿತ ಅನೇಕ ಕಾರ್ಯಕರ್ತರು, ಮಾಜಿ ಜಿಲ್ಲಾ, ತಾಲೂಕು ಪಂಚಾಯ್ತಿ ಸದಸ್ಯರು, ಹಾಲಿ ಬಿಬಿಎಂಪಿ ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
