ಲೋಕಸಭಾ ಚುನಾವಣೆ ಗಮನದಲ್ಲಿರಿಸಿ ಕೆಲಸ ಮಾಡಿ….!

ಬೆಂಗಳೂರು:

            ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ 31 ಸರಣಿ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 50 ಗಂಟೆಗಳ ಕಾಲ ಕಾಂಗ್ರೆಸ್ ಶಾಕರ ಸಮಸ್ಯೆಗಳನ್ನು ಆಲಿಸಿದರು. 5 ದಿನಗಳ ಕಾಲ ನಡೆದ ಸರಣಿ ಸಭೆಯಲ್ಲಿ ಶಾಸಕರು ಹಾಗೂ ಸಂಸದರು ಭಾಗವಹಿಸಿದ್ದರು.

    ಸಭೆಯಲ್ಲಿ ಶಾಸಕರು ಮುಖ್ಯಮಂತ್ರಿಗಳಿಗೆ ಹಲವು ಸಲಹೆಗಳನ್ನು ನೀಡಿದರು. ಹಲವು ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕೈಗೆತ್ತಿಕೊಳ್ಳುವಂತೆ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಈ ವೇಳೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಲೋಕಸಭಾ ಚನಾವಣೆಯನ್ನು  ಗಮನದಲ್ಲಿಟ್ಟುಕೊಂಡು ಆದ್ಯತೆ ಮತ್ತು ಲಭ್ಯತೆಯ ಆಧಾರದ ಮೇಲೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮತ್ತು ಕುಂದುಕೊರತೆಗಳನ್ನು ಪರಿಹರಿಸಿ. ನಿಗದಿತ ಸಮಯಕ್ಕೆ ಅನುಗುಣವಾಗಿ ಕಾಮಗಾರಿಗಳ ಕೈಗೊಳ್ಳುವಂತೆ ಎಂದು ಸೂಚನೆ ನೀಡಿದರು.

   ಪ್ರತಿಯೊಬ್ಬ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿರುವ ಪಕ್ಷದ ಕಚೇರಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸೂಚನೆ ನೀಡದರು.

    ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡವು ಜಿಲ್ಲಾವಾರು ಪ್ರತ್ಯೇಕ ಬೇಡಿಕೆಗಳು ಮತ್ತು ಪ್ರಗತಿ ಪಟ್ಟಿಗಳನ್ನು ಸಿದ್ಧಪಡಿಸಿ ಸಂಬಂಧಪಟ್ಟ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಲ್ಲಿಸಲಿದೆ.

 

Recent Articles

spot_img

Related Stories

Share via
Copy link