ವಾರ್ಷಿಕ ಮಹಾಸಭೆ

ತುಮಕೂರು:

              ಶ್ರೀ ವಿಶ್ವಕರ್ಮ ಪತ್ತಿನ ಸಹಕಾರ ಸಂಘದ 8ನೇ ವರ್ಷದ 2017-18ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸೆ.2 ರಂದು ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್ ಸಮೀಪವಿರುವ ಸಿದ್ಧಗಂಗಾ ಕಾಲೇಜಿನ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಸ್.ವಾಸುದೇವ ಅಧ್ಯಕ್ಷತೆಯಲ್ಲಿ ಜರುಗಲಿದೆ.

               ಇದೇ ಸಂದರ್ಭದಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಮಾರ್ಚ್, ಏಪ್ರಿಲ್‍ನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚು, ಪದವಿ/ ಸ್ನಾತಕೋತ್ತರ ಶಿಕ್ಷಣದಲ್ಲಿ ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು.

                ಆಸಕ್ತ ವಿದ್ಯಾರ್ಥಿಗಳು ಆ.28ರೊಳಗೆ ಅಂಕಪಟ್ಟಿ ನಕಲು ಪ್ರತಿ ಸಂಘದ ಕಛೇರಿಗೆ ಸಲ್ಲಿಸಬಹುದು ಎಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಯು. ಚಿದಾನಂದರಾದ್ಯ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap