ವಿದ್ಯಾರ್ಥಿಗಳು ದೇಶಪ್ರೇಮ, ದೇಶಭಕ್ತಿ ಬೆಳೆಸಿಕೊಳ್ಳಬೇಕು : ಪೂರ್ಣಿಮಾಶ್ರೀನಿವಾಸ್

ಹಿರಿಯೂರು:

         ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಸಂಘಟನೆ, ಸೇವಾಮನೋಭಾವನೆ, ನಾಯಕತ್ವ ಮುಂತಾದ ಗುಣಗಳನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಬೆಳೆಸುತ್ತಿದ್ದು, ಇದರ ಜೊತೆಯಲ್ಲಿಯೇ ವಿದ್ಯಾರ್ಥಿಗಳು ದೇಶಪ್ರೇಮ ದೇಶಭಕ್ತಿಯನ್ನು, ಬೆಳೆಸಿಕೊಳ್ಳಬೇಕು ಎಂಬುದಾಗಿ ಕ್ಷೇತ್ರದ ಶಾಸಕಿ ಪೂರ್ಣಿಮಾಶ್ರೀನಿವಾಸ್ ಹೇಳಿದರು.

        ನಗರದ ನೆಹರು ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣಇಲಾಖೆ ಹಾಗೂ ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ರ್ಯಾಲಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

         ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣಇಲಾಖೆಯ ಬಿಆರ್‍ಸಿ ರಾಘವೇಂದ್ರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಶಿವಾನಂದ್, ಎಂ.ಜಿ.ಗೋಪಾಲ್, ಶಶಿಕಲಾರವಿಶಂಕರ್, ಹೆಚ್‍ಎಸ್.ಸುಂದರ್‍ರಾಜ್, ವಾಣಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ಹೆಚ್. ತಿಪ್ಪೇಸ್ವಾಮಿ , ವೆಂಕಟೇಶ್ , ಎಂ.ಎಸ್.ರಾಘವೇಂದ್ರ, ಪ್ರಶಾಂತ್, ಸ್ಕೌಟ್ಸ್ ಅಂಡ್ ಗೈಡ್ಸ್ ತಾಲೂಕು ಕಾರ್ಯದರ್ಶಿ ಕಲ್ಲೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link