ವಿಷಾನಿಲ ಸೋರಿಕೆ : ಬಾತ್‌ ರೂಮ್‌ ನಲ್ಲಿ ಶವವಾದ ಜೋಡಿ

ಬೆಂಗಳೂರು:
  
      ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ ಇಬ್ಬರ ಶವ ಸ್ನಾನದ ಕೋಣೆಯಲ್ಲಿ ಪತ್ತೆಯಾಗಿದೆ. ಪೊಲೀಸರು ಎರಡೂ ಶವಗಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ದಾರುಣ ಅಂತ್ಯ ಕಂಡಿದೆ.

    ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್ ಮತ್ತು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಸುಧಾರಾಣಿ ಮೃತ ದುರ್ದೈವಿಗಳು. ಚಂದ್ರಶೇಖರ್ ಮತ್ತು ಸುಧಾರಾಣಿ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಲು ನಿರ್ಧರಿಸಿದ್ದರು.

    ಜೂನ್ 10ರಂದು ರಾತ್ರಿ ಸುಮಾರು 9 ಗಂಟೆಗೆ ತರಬನಹಳ್ಳಿಯ ಚಂದ್ರಶೇಖರ್ ನಿವಾಸಕ್ಕೆ ಸುಧಾರಾಣಿ ಬಂದಿದ್ದಾರೆ. ಈ ವೇಳೆ ಇಬ್ಬರೂ ಜೊತೆಯಾಗಿ ಸ್ನಾನ ಮಾಡಲು ನಿರ್ಧರಿಸಿದ್ದಾರೆ. ಸ್ನಾನದ ಕಿಟಕಿ, ಬಾಗಿಲು ಮುಚ್ಚಿ ಗ್ಯಾಸ್ ಗೀಸರ್ ಆನ್ ಮಾಡಿಕೊಂಡಿದ್ದಾರೆ.

     ಈ ವೇಳೆ ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಹಿಂದೆ ಆರ್​ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಇದೇ ಮಾದರಿಯ ಘಟನೆ ನಡೆದಿತ್ತು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap