ಶಾಸಕ ಗಣೇಶ್ ಅರೆಸ್ಟ್!!!

ಬೆಂಗಳೂರು: 

      ಶಾಸಕ ಆನಂದ್​ ಸಿಂಗ್​ ಮೇಲೆ​ ರೆಸಾರ್ಟ್​ನಲ್ಲಿ ಹಲ್ಲೆ ಮಾಡಿದ್ದ ಶಾಸಕ ಕಂಪ್ಲಿ ಗಣೇಶ್​​ರನ್ನು ರಾಮನಗರ ಪೊಲೀಸರು ಮುಂಬೈನಲ್ಲಿ ಅರೆಸ್ಟ್ ಮಾಡಿದ್ದಾರೆ.

      ಆಪರೇಶನ್ ಕಮಲ ಭೀತಿಯಿಂದ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ಈಗಲ್ಟನ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್  ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಮಧ್ಯೆ  ಜನವರಿ 20ರ ರಾತ್ರಿ ತೀವ್ರ ಮಾರಾಮಾರಿ ನಡೆದು ಆನಂದ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

       ಘಟನೆಯ ನಂತ್ರ ತಲೆ ಗಣೇಶ್ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್​ ತೆಗೆದುಕೊಂಡಿದ್ದರು.

      ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿರುವ ಶಾಸಕ ಗಣೇಶ್ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಪ್ರಕರಣಗಳು ದಾಖಲಾಗಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link