ತುಮಕೂರು:
ಮಾಜಿ ಪ್ರದಾನಮಂತ್ರಿ ಹೆಚ್.ಡಿ.ದೇವೇಗೌಡರು ಶ್ರೀಕೃಷ್ಣ ಪರಮಾತ್ಮನಿದ್ದಂತೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅಭಿಪ್ರಾಯಪಟ್ಟರು.
ತುಮಕೂರಿನಲ್ಲಿ ಮಾತನಾಡುತ್ತಿದ್ದ ಅವರು, ನಮಗೂ ಬಿಜೆಪಿಯ ಶಾಸಕರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯುವುದು ಗೊತ್ತು. ಆದರೆ, ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದಾಗಿ ನಾವು ಸುಮ್ಮನಿದ್ದೇವೆ. ಅವರ ಮಾರ್ಗದರ್ಶನ ಇರುವವರೆಗೂ ಜೆಡಿಎಸ್ ಪಕ್ಷವನ್ನು ಯಾರೂ ಏನೂ ಮಾಡುವುದಕ್ಕಾಗುವುದಿಲ್ಲ. ನೂರು ಮಂದಿ ಯಡಿಯೂರಪ್ಪ ಬಂದರೂ ಏನೂ ಮಾಡಲಾಗದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/09/DeveGowda-kfDF-621x414@Liv.gif)