ಶ್ರೀಲಂಕಾ ನೌಕಾಪಡೆಯಿಂದ ಮೀನುಗಾರರ ಮೇಲೆ ದಾಳಿ : ಸ್ಟಾಲಿನ್‌

ರಾಮನಾಥಪುರ: 

    ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ದುರ್ಬಲವಾಗಿದೆ” ಎಂಬುದನ್ನು ತೋರಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶುಕ್ರವಾರ ಹೇಳಿದ್ದಾರೆ.

    ಇಂದು ಮೀನುಗಾರರ ಕಲ್ಯಾಣ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಟಾಲಿನ್, 1974ರಲ್ಲಿ ಪರಸ್ಪರ ಒಪ್ಪಂದದ ಮೂಲಕ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿದ್ದ ಕಚ್ಚತೀವು ದ್ವೀಪವನ್ನು ಹಿಂಪಡೆಯುವುದೇ ಮೀನುಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಪುನರುಚ್ಚರಿಸಿದ್ದಾರೆ.

    ಆಡಳಿತಾರೂಢ ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್, ತಮ್ಮ ತಂದೆ ಮತ್ತು ದಿವಂಗತ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಕಚ್ಚತೀವು ಭಾರತಕ್ಕೆ ಸೇರಿದ್ದು ಎಂದು ವರದಿ ನೀಡಿದ್ದರು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link