ಬೆಂಗಳೂರು:
ಅಪಘಾತ ದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಸಿದ್ದನಗವಿ ಜ್ಞಾನಾನಂದಾಶ್ರಮದ ಶ್ರೀ ಶಿವಾತ್ಮನಂದ ಸರಸ್ವತಿ ಸ್ವಾಮೀಜಿ(59) ಅವರು ಚಿಕಿತ್ಸೆ ಫಲಿಸದೆ ಬುಧವಾರ ಇಹಲೋಕ ತ್ಯಜಿಸಿದ್ದು ಗುರುವಾರ ನಂದಿಯ ಆಶ್ರಮದಲ್ಲಿ ಸಮಾಧಿ ಕ್ರಿಯೆ ನೆರವೇರಿಸಲಾಯಿತು.
ವೇದ, ಉಪನಿಷತ್, ಭಾಷ್ಯ ಗಳು ಸೇರಿದಂತೆ ಸಂಸ್ಕೃತ, ಕನ್ನಡ ಗ್ರಂಥಗಳ ಬಗ್ಗೆ ಆಳ ಪಾಂಡಿತ್ಯ ಹೊಂದಿದ್ದ ಶ್ರೀ ಗಳು ರಾಜ್ಯ, ಹೊರರಾಜ್ಯ ದೇಶ ವಿದೇಶಗಳಲ್ಲಿ ತಮ್ಮ ವಿದ್ವತ್ ಪೂರ್ಣ ಉಪನ್ಯಾಸ ಗಳಿಂದ ರಾಷ್ಟ್ರ ಸಂತರೆಂದು ಬಿರುದಾಂಕಿತ ರಾಗಿದ್ದರು.
ಕವಿ, ಲೇಖಕರು ಆಗಿದ್ದ ಶ್ರೀ ಗಳು ವಿಶ್ವಕರ್ಮ ಸಮಾಜಕ್ಕೆ ದಾರಿದೀಪ ವಾಗಿ, ಎಲ್ಲಾ ಸಮಾಜದ ವರಿಗೂ ಗುರುವಾಗಿ ಮಾರ್ಗದರ್ಶನ ಮಾಡುತ್ತಿದ್ದರು.ಇಂತಹ ಶ್ರೇಷ್ಠ ಗುರುವಿನ ಅಗಲಿಕೆ ನಾಡಿಗೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅರೆಮಾದನಹಳ್ಳಿ ಶ್ರೀಗಳು, ಶ್ರೀ ರವಿ ಶಂಕರ್ ಗುರೂಜಿ ಸೇರಿದಂತೆ ನಾಡಿನ ಅನೇಕ ಗಣ್ಯರು ಶ್ರೀ ಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಅಂತ್ಯಕ್ರಿಯೆ ಯಲ್ಲಿ ಸಮಾಜದ ವಿವಿಧ ಮಠಾಧೀಶರು, ಗಣ್ಯರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/12/WhatsApp-Image-2021-12-16-at-5.03.48-PM.jpeg)