ಸರ್ಕಾರ ಬೀಳಿಸಲು ಯತ್ನಿಸಿದಲ್ಲಿ ಬಿಜೆಪಿ ಸರ್ವನಾಶ : ವೀರಪ್ಪ ಮೊಯ್ಲಿ

 ಚಿಕ್ಕಬಳ್ಳಾಪುರ:

      ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಯತ್ನಿಸಿದಲ್ಲಿ ಬಿಜೆಪಿ ಪಕ್ಷವು ಸರ್ವ ನಾಶವಾಗಲಿದೆ ಎಂದು ಸಂಸದ ಎಂ.ವೀರಪ್ಪಮೊಯ್ಲಿ ಅವರು ಹೇಳಿದರು.

      ಚಿಕ್ಕಬಳ್ಳಾಪುರದಲ್ಲಿ ಮಾತನಾಡುತ್ತಿದ್ದ ಅವರು, ಬಿಜೆಪಿಯು ಆಪರೇಷನ್ ಕಮಲಕ್ಕೆ ಕೈ ಹಾಕಿ ನಷ್ಟ ಅನುಭವಿಸಿದೆ. ಈಗೇನಾದರೂ ಮತ್ತದೇ ಕಾರ್ಯಕ್ಕೆ ಮುಂದಾದರೆ, ರಾಜ್ಯದಲ್ಲದೆ, ಕೇಂದ್ರದಲ್ಲೂ ಬಿಜೆಪಿ ಸರ್ವನಾಶವಾಗಲಿದೆ ಎಂದು ಹೇಳಿದರು.

      ಸಮ್ಮಿಶ್ರ ಸರ್ಕಾರ ಬೀಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಲ್ಲ ಅನ್ನೋ ವಿಶ್ವಾಸವಿದೆ ಎಂದು ಸಂಸದ ವೀರಪ್ಪ ಮೊಯಿಲಿ ತಿಳಿಸಿದ್ದಾರೆ. 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap