ಸಾಮೂಹಿಕ ಪ್ರಾರ್ಥನೆಯಲ್ಲಿ ಸಂತ್ರಸ್ಥರಿಗೆ ನಿಧಿ ಸಂಗ್ರಹ

ಹರಪನಹಳ್ಳಿ :

      ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಬುಧುವಾರ ಪಟ್ಟಣದಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಿದರು.

      ಪಟ್ಟಣದ ಹೊಸಪೇಟೆ ರಸ್ತೆಯ ತರಳಬಾಳು ಕಲ್ಯಾಣ ಮಂಟಪ ಹಿಂಭಾಗ ಆಲಿ ಆೀಸ್ ಮೈದಾನದಲ್ಲಿ ಮುಸ್ಲಿಂ ಬಾಂಧವರು ಬೆಳಿಗ್ಗೆ 8.00ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಯೇ ಪ್ರತ್ಯೇಕ ಸ್ಥಳದಲ್ಲಿ ಹಾಕಿದ್ದ ಶಾಮಿಯಾನದಲ್ಲಿ ಮುಸ್ಲಿಂ ಮಹಿಳೆಯರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

      ನಂತರ 9ಕ್ಕೆ ಹಡಗಲಿ ರಸ್ತೆಯ ಈದ್ಗಾ ಮೈದಾನದ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಅಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

      ಈ ಸಂದರ್ಭದಲ್ಲಿ ಕೇರಳ ಹಾಗೂ ರಾಜ್ಯದ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ನೇರವಿಗಾಗಿ ನಿಧಿ ಸಂಗ್ರಹಣೆ ಮಾಡಿದರು.
ಈ ವೇಳೆ ಅಂಜುಮನ್ ಅದ್ಯಕ್ಷ ಎನ್.ಜಾವೀದ್, ಪುರಸಭಾ ಮಾಜಿ ಅಧ್ಯಕ್ಷ ಡಿ.ರೇಹಮಾನ್‍ಸಾಬ್, ಬಿ.ಮೆಹಬೂಬ್‍ಸಾಬ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎ.ಮೂಸಾಸಾಬ್, ಪುರಸಭಾ ಸದಸ್ಯ ಬಿ.ನಜೀರ್ ಆಹ್ಮದ್, ಪಿಎಲ್‍ಡಿ ಬ್ಯಾಂಕ ಸದಸ್ಯ ಲಾಟಿ ದಾದಪೀರ್, ಜಾಕೀರ್ ಸರ್ಕಾವಸ್, ಇರ್ಷಾದ್, ಸೇರಿದಂತೆ ಮತ್ತಿತರರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link