ಸಿದ್ದರಾಮನಹುಂಡಿಯಿಂದ ಶಕ್ತಿಸೌಧದವರೆಗೆ ಸಿದ್ದರಾಮಯ್ಯ ಜೀವನ ಪಯಣದ ಮೈಲಿಗಲ್ಲುಗಳು

 ಸಿದ್ದರಾಮಯ್ಯನವರ ಜೀವನಗಾಥೆಯೆಂದರೆ ಕೇವಲ ಸ್ವಂತಪರಿಶ್ರಮದಿಂದ ಯಶಸ್ಸಿನ ಎತ್ತರಕ್ಕೆ ಏರಿದ ಈ ನಾಡಿನ ಸಾಮಾನ್ಯ ಮನುಷ್ಯರ ಬದುಕಿನ ಕತೆ. ಸಿದ್ದರಾಮಯ್ಯನವರು ಹುಟ್ಟಿದ್ದು ಈ ನಾಡಿನ ಸಾವಿರಾರು ಹಳ್ಳಿಗಳಲ್ಲೊಂದಾದ ಕುಗ್ರಾಮದಲ್ಲಿ. ಹೆತ್ತವರೇನು ಪ್ರಭಾವಿಗಳಲ್ಲ, ಅವರದ್ದು ಸಾಮಾನ್ಯರೈತ ಕುಟುಂಬ. ಹಳ್ಳಿಗಾಡಿನ ಬದುಕಿನ ಎಲ್ಲ ಅಡೆತಡೆಗಳನ್ನು ಸವಾಲಾಗಿ ಸ್ವೀಕರಿಸಿ ಮೆಟ್ಟಿನಿಂತು ಸಾಧನೆಯ ಶಿಖರ ಏರಿದ ಸಿದ್ದರಾಮಯ್ಯನವರ ಬಾಳದಾರಿ ಇಂತಹದ್ದೇ ಹಿನ್ನೆಲೆಯಿಂದ ಬಂದವರಿಗೆ ಮಾರ್ಗದರ್ಶನ ಮಾತ್ರವಲ್ಲ ಸ್ಪೂರ್ತಿಯೂ ಹೌದು.’
ಕರ್ನಾಟಕದ 16ನೇ ವಿಧಾನಸಭೆಯ ಬಹುಮತ ಪಡೆದ ಕಾಂಗ್ರೆಸ್  ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿ ಮೇ 20ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ದೇವರಾಜ ಅರಸು ಅವರಂತೆ ಜನಸಾಮಾನ್ಯರ ಜನನಾಯಕ ಎಂದೇ ಬಿಂಬಿತರಾಗಿರುವ ಸಿದ್ದರಾಮಯ್ಯ ಅವರ ಜೀವನ, ರಾಜಕೀಯವಾಗಿ ಪಡೆದ ಅಧಿಕಾರ ಸ್ಥಾನಮಾನಗಳು ಗಮನಾರ್ಹವಾದವು.                        

ಸಿದ್ದರಾಮಯ್ಯ ಅವರ ಹುಟ್ಟೂರುಮೈಸೂರು ಜಿಲ್ಲೆ ವರುಣಾ ಹೋಬಳಿಯ ಸಿದ್ದರಾಮನ ಹುಂಡಿ ಗ್ರಾಮ, ಜನನ 1948ರ ಆಗಸ್ಟ್ 12. ಇವರದ್ದು ಕೃಷಿ ಪ್ರಧಾನ ಕುಟುಂಬ.ಅAದಿನ ಕಾಲದಲ್ಲಿ ಎಸ್.ಎಸ್.ಎಲ್.ಸಿ ಪಾಸು ಮಾಡುವುದೇ ಕಠಿಣವಾಗಿತ್ತು.ಅಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಕುಟುಂಬದಲ್ಲಿ ಪದವಿ ಪಡೆದ ಮೊದಲಿಗರಾದರು.

ಭಾಷಣ ಮಾಡುವುದರಲ್ಲಿ ಸಿದ್ದರಾಮಯ್ಯ ಅವರದ್ದು ಎತ್ತಿದ ಕೈ. ಶಾಲಾ-ಕಾಲೇಜು ದಿನಗಳಲ್ಲಿ ಉತ್ತಮ ಭಾಷಣಕಾರರಾಗಿ ಹೊರಹೊಮ್ಮುವ ಮೂಲಕ ಸಿದ್ದರಾಮಯ್ಯ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಬಾಲ್ಯ ಮತ್ತು ಶಿಕ್ಷಣ:   ಸಿದ್ದರಾಮಯ್ಯ ಅವರು ಬಾಲ್ಯದ ದಿನಗಳನ್ನು ಕಳೆದದ್ದು ಸ್ವಗ್ರಾಮಸಿದ್ದರಾಮನ ಹುಂಡಿಯಲ್ಲೇ, ಆರಂಭದ ದಿನಗಳಲ್ಲಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇನಿಲ್ಲಿಸಬೇಕಾದ ಪರಿಸ್ಥಿತಿ ಬಂದಿತ್ತು. ಶಾಲೆ ಬಿಟ್ಟು ದನ ಮೇಯಿಸುವ ಕಾಯಕಕ್ಕೆಮುಂದಾಗಬೇಕಾಯಿತು. ಆದರೆ ಬಾಲಕ ಸಿದ್ದರಾಮಯ್ಯ ಅವರಲ್ಲಿನ ಪ್ರತಿಭೆಯನ್ನು ಗಮನಿಸಿದಗ್ರಾಮದ ಶಾಲೆಯ ಶಿಕ್ಷಕರು ಶಾಲೆಗೆ ಕರೆತಂದು ನೇರವಾಗಿ 4ನೇ ತರಗತಿಗೆ ಪ್ರವೇಶ ಕೊಟ್ಟರು.ಬಾಲಕ ಆಗಿದ್ದಾಗ ತಾವು ದನ ಮೇಯಿಸಲು ಹೋಗುತ್ತಿದ್ದ ಸಂದರ್ಭವನ್ನು ಸಿದ್ದರಾಮಯ್ಯ ಅವರುಆಗಾಗ ನೆನಪು ಮಾಡಿಕೊಳ್ಳುವುದುಂಟು.

ಪ್ರಾಥಮಿಕ ಶಿಕ್ಷಣದ ಬಳಿಕ ಸಿದ್ದರಾಮಯ್ಯ ಅವರು ಮುಖ ಮಾಡಿದ್ದು, ಮೈಸೂರು ಕಡೆಗೆ. ಕಾಲೇಜು ಶಿಕ್ಷಣಕ್ಕಾಗಿ ಯುವರಾಜ ಕಾಲೇಜಿಗೆ ಪ್ರವೇಶ ಪಡೆದಸಿದ್ದರಾಮಯ್ಯ ಅವರು ಅಲ್ಲಿಯೇ ಬಿ.ಎಸ್ಸಿ ಪದವಿ ಪಡೆದರು. ನನ್ನನ್ನು ಡಾಕ್ಟರ್ ಮಾಡಬೇಕೆಂದು ಅಪ್ಪನ ಯೋಚನೆಯಾಗಿತ್ತು ಎಂದು ಸಿದ್ದರಾಮಯ್ಯನವರು ಹಳೆಯ ನೆನಪನ್ನುಮೆಲುಕುಹಾಕುತ್ತಾರೆ. ಅಪ್ಪನ ಬಯಕೆಯ ಹೊರತಾಗಿಯೂ ಸಿದ್ದರಾಮಯ್ಯನವರು ಕಾನೂನು ವ್ಯಾಸಂಗಕ್ಕೆ ಮುಂದಾದರು. ಕಾನೂನು ಪದವಿಗಾಗಿ ಶಾರದಾ ವಿಲಾಸ ಕಾಲೇಜಿಗೆ ಸೇರ್ಪಡೆಯಾದರು.ಅದರ ನಂತರ ಕೆಲಕಾಲ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದರು. ಇದಾದ ನಂತರ ವಕೀಲ ವೃತ್ತಿಯನ್ನು ಆರಂಭಿಸಿದರು.

ಹೋರಾಟದ ಬದುಕು:  ನ್ಯಾಯವಾದಿಯಾಗಿ ಸಿದ್ದರಾಮಯ್ಯ ಅವರ ಮನಸ್ಸು ನ್ಯಾಯಾಲಯದಲ್ಲೇ ಕಳೆದು ಹೋಗಲಿಲ್ಲ. ಶೋಷಿತ ವರ್ಗಗಳ ಪರ ಅವರ ಮನ ಸದಾ ಮಿಡಿಯುತ್ತಿತ್ತು. ಹೀಗಾಗಿ ಶ್ರೀ ಸಿದ್ದರಾಮಯ್ಯ ಅವರು ಸಮಾಜವಾದಿ ಚಿಂತಕ ಡಾ. ರಾಮ ಮನೋಹರ ಲೋಹಿಯಾ ಅವರ ಪ್ರಭಾವಕ್ಕೆ ಒಳಗಾದರು.  ವಿದ್ಯಾರ್ಥಿ ಆಗಿದ್ದಾಗ ಮೈಸೂರಿನ ಸುಬ್ಬರಾಯನ ಕೆರೆ ಬಳಿ ಇರುವ ಕಟ್ಟಡದಲ್ಲಿ ರೂಂ ಒಂದನ್ನು ಬಾಡಿಗೆಗೆ ಪಡೆದುಕೊಂಡಿದ್ದ ಸಿದ್ದರಾಮಯ್ಯ ಅವರು ಕಷ್ಟದ ದಿನಗಳನ್ನು ಎದುರಿಸಿದ ಕಾಲವದು. ಅಂದಿನ ಆ ಅನುಭವವೇ ಮುಖ್ಯಮಂತ್ರಿಯಾಗಿ ಬಡವರ ಪರವಾದ ಹಲವಾರು ಯೋಜನೆಗಳನ್ನು ಇಂದು ಜಾರಿಗೆ ತರಲು ಸಹಕಾರಿ ಆಯಿತು. ಬಡವರ ಕಷ್ಟ ಏನು ಎಂಬುದು ನನಗೆ ಗೊತ್ತು, ಅದನ್ನು ಸ್ವಂತ ಅನುಭವಿಸಿದವನು ನಾನು. ಆದ್ದರಿಂದಲೇ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಮತ್ತಿತರ ಯೋಜನೆಗಳನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಪ್ರೊ.ಪಿ.ಎಂ ಚಿಕ್ಕಬೋರಯ್ಯ ಎಂಬುವರ ಬಳಿ ವಕೀಲ ವೃತ್ತಿಯನ್ನು ಅಭ್ಯಾಸ ಮಾಡುತ್ತಿದ್ದ ಶ್ರೀ ಸಿದ್ದರಾಮಯ್ಯ ಅವರು ಕ್ರಮೇಣ ಸಾರ್ವಜನಿಕ ಜೀವನಕ್ಕೆ ತೆರೆದುಕೊಂಡರು. ನಾಯಕತ್ವದ ಗುಣಲಕ್ಷಣಗಳನ್ನು ಮೈಗೂಡಿಸಿಕೊಳ್ಳತೊಡಗಿದರು.

ರಾಜಕಾರಣದ ಆರಂಭ:

ಶೋಷಿತ ವರ್ಗಗಳ ಕಷ್ಟಕಾರ್ಪಣ್ಯಗಳಿಗಾಗಿ ಸದಾ ಮಿಡಿಯುತ್ತಿದ್ದ ಶ್ರೀ ಸಿದ್ದರಾಮಯ್ಯನವರಲ್ಲಿ ಸಾಮಾಜಿಕ ನ್ಯಾಯದ ಆಶಯ ಸೈದ್ದಾಂತಿಕವಾಗಿ ಸ್ಪಷ್ಟಗೊಳ್ಳಲು ಕಾರಣವಾದುದು ಡಾ,ರಾಮಮನೋಹರ ಲೋಹಿಯಾ ಚಿಂತನೆ. ಇದಕ್ಕಾಗಿ ಅವರು ವಕೀಲ ವೃತ್ತಿಯನ್ನು ಬಿಟ್ಟು ರಾಜಕಾರಣಕ್ಕೆ ಧುಮುಕಿದರು. ಹೀಗೆ ವಕೀಲ ವೃತ್ತಿಯನ್ನು ಬಿಟ್ಟು ಬಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿ ಒಂದೊAದೇ ಹೆಜ್ಜೆ ಇಡುತ್ತಾ ಮುಂದೆ ಸಾಗಿದರು. 1978ರಲ್ಲಿ ರಾಜಕಾರಣದಲ್ಲಿ ಅಧಿಕೃತವಾಗಿ ಪ್ರವೇಶಮಾಡಿದ ಸಿದ್ದರಾಮಯ್ಯ ಅವರು ತಾಲ್ಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾದರು. ಜೊತೆ ಜೊತೆಗೆ ರೈತ ಚಳವಳಿಯತ್ತ ಆಕರ್ಷಿತರಾದರು. ಹೀಗಾಗಿ ಅವರಿಗೆ ಪ್ರೊ.ಎಂ.ಡಿ ನಂಜುAಡ ಸ್ವಾಮಿ ಅವರ ಒಡನಾಟ ಲಭಿಸಿತು.

1980ರಲ್ಲಿ ಶ್ರೀ ಸಿದ್ದರಾಮಯ್ಯ ಅವರು ಮೊದಲಬಾರಿ ಮೈಸೂರು ಲೋಕಸಭೆ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕೆ ಇಳಿದರು. ಆದರೆ ಗೆಲುವು ಸಾಧ್ಯವಾಗಲಿಲ್ಲ. ಆದರೆ ಹುಟ್ಟು ಛಲಗಾರ ಆ ಸೋಲಿನಿಂದ ಹಿಮ್ಮೆಟ್ಟಲಿಲ್ಲ. ಮೊದಲ ಸೋಲನ್ನೇ ಗೆಲುವಿನ ಸೋಪಾನ ಮಾಡಿಕೊಂಡ ಶ್ರೀ ಸಿದ್ದರಾಮಯ್ಯನವರು 1983ರ ವಿಧಾನಸಭೆ ಚುನಾವಣೆಯಲ್ಲಿ ಲೋಕದಳದ ಅಭ್ಯರ್ಥಿಯಾಗಿ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರು. ತಕ್ಕಡಿ ಗುರುತಿನೊಂದಿಗೆ ಕಣಕ್ಕಿಳಿದಿದ್ದ ಶ್ರೀ ಸಿದ್ದರಾಮಯ್ಯನವರು ಇಂದಿರಾ ಕಾಂಗ್ರೆಸ್ನ ಡಿ ಜಯದೇವರಾಜ ಅರಸು ಅವರನ್ನು ಸೋಲಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು.. ಇದರಲ್ಲಿ ಮೈಸೂರು ತಾಲ್ಲೂಕಿನ ಮುಖಂಡರಾಗಿದ್ದ ಕೆಂಪವೀರಯ್ಯ ಎಂಬುವರ ಪಾತ್ರ ಪ್ರಮುಖವಾಗಿತ್ತು.

ಸಿದ್ದರಾಮಯ್ಯ ಅವರು ವಿಧಾನಸಭೆಗೆ ಪ್ರವೇಶ ಪಡೆದಾಗ ಶ್ರೀರಾಮಕೃಷ್ಣ ಹೆಗಡೆ ಅವರ ನೇತೃತ್ವದ ಸರ್ಕಾರ ಇತ್ತು. ಸರ್ಕಾರ ರಚನೆಗೆ ಹೆಗಡೆ ಅವರು ಪಕ್ಷೇತರರು ಹಾಗೂ ಬಿಜೆಪಿ ಸದಸ್ಯ ಬೆಂಬಲ ಪಡೆದಿದ್ದರು. ಶ್ರೀ ಸಿದ್ದರಾಮಯ್ಯ ಅವರೂ ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಹೀಗಾಗಿ ಅವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಯಿತು. ಬಳಿಕ ರೇಷ್ಮೆ ಸಚಿವರಾದರು.

1985ರಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆದಾಗ ಶ್ರೀ ಸಿದ್ದರಾಮಯ್ಯ ಅವರು ಜನತಾಪಕ್ಷದಿಂದ ಸ್ಪರ್ಧಿಸಿ ಎರಡನೇ ಬಾರಿ ಚುನಾಯಿತರಾದರು. ಬಳಿಕ ಪಶು ಸಂಗೋಪನೆ, ರೇಷ್ಮೆ ಸಚಿವರಾದರು. ಎಸ್.ಆರ್ ಬೊಮ್ಮಾಯಿ ಅವರ ಮಂತ್ರಿಮAಡಲದಲ್ಲಿ ಸಾರಿಗೆ ಸಚಿವರಾಗಿಯೂ ಕಾರ್ಯನಿರ್ವಹಿಸಿದರು. 1989ರಲ್ಲಿ ಜನತಾಪಕ್ಷ ಇಬ್ಭಾಗವಾಗಿ ಜನತಾದಳ ಮತ್ತು ಸಮಾಜವಾದಿ ಜನತಾಪಕ್ಷ ಅಸ್ತಿತ್ವಕ್ಕೆ ಬಂತು. ಶ್ರೀ ಸಿದ್ದರಾಮಯ್ಯ ಅವರು ಆಗ ಜನರಾದಳದೊಂದಿಗೆ ಗುರುತಿಸಿಕೊಂಡರು. ಆದರೆ ಆ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಪರಾಭವ ಹೊಂದಿದರು. 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು. ಅದು ಶ್ರೀ ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ತುಸು ಹಿನ್ನಡೆಯ ಕಾಲ.

ರಾಜಕೀಯ ತಿರುವು

ಜೆ.ಡಿ.ಎಸ್ ನಿಂದ ಹೊರಬಂದ ಶ್ರೀ ಸಿದ್ದರಾಮಯ್ಯ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ 2006ರ ಜುಲೈ 22ರಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಈ ಬೆಳವಣಿಗೆ ಶ್ರೀ ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಮತ್ತೊಂದು ತಿರುವು ನೀಡಿತು. ಬಳಿಕ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಮರುಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ರೋಚಕ ಗೆಲುವು ಸಾಧಿಸಿದರು.

2008ರಲ್ಲಿ ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆ ಆಯಿತು. ಆಗ ವರುಣಾ ಕ್ಷೇತ್ರ ಹೊಸದಾಗಿ ರಚನೆ ಆಯಿತು. ಆ ಕ್ಷೇತ್ರದಿಂದ ಶ್ರೀ ಸಿದ್ದರಾಮಯ್ಯ ಅವರು ವಿಧಾನಸಭೆ ಪ್ರವೇಶಿಸಿದರು. ಬಳಿಕ ಅವರು ವಿಧಾನಸಭೆ ಪ್ರತಿಪಕ್ಷ ನಾಯಕರಾದರು. ಈ ಸಂದರ್ಭದಲ್ಲಿ ಶ್ರೀ ಸಿದ್ದರಾಮಯ್ಯ ಅವರು ಬಳ್ಳಾರಿಯ ಗಣಿಧಣಿಗಳ ವಿರುದ್ಧ ರಣಕಹಳೆ ಮೊಳಗಿಸಿ ಬೆಂಗಳೂರಿನಿAದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿ ರಾಜ್ಯ ರಾಜಕೀಯದಲ್ಲಿ ಹೊಸಸಂಚಲವನ್ನೇ ಉಂಟುಮಾಡಿದರು.

                                            ಮುಖ್ಯಮಂತ್ರಿ ಗಾದಿಯತ್ತ

2013ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಮಾತ್ರ ಶ್ರಮಿಸದೆ ಇಡೀ ರಾಜ್ಯಸುತ್ತಿ ಕಾಂಗ್ರೆಸ್ ಪರ ಪ್ರಚಾರ ಮಾಡಿ ಪಕ್ಷದ ಭಾರೀ ಗೆಲುವಿಗೆ ಕಾರಣರಾದರು. 2013 ಮೇ 13 ರಂದು ಈ ನಾಡಿನ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ನವರ ಮುಂದೆ ಹಲವಾರು ಸವಾಲುಗಳಿದ್ದವು.  ಹಲವಾರು ಸಂದರ್ಭಗಳಲ್ಲಿ ಅವರೇ ಹೇಳಿಕೊಂಡಿರುವAತೆ ಕೋಮು ಸೌಹಾರ್ದತೆಗೆ ಹೆಸರಾಗಿದ್ದ ಕರ್ನಾಟಕದಲ್ಲಿ ಕೋಮು ಸೌಹಾರ್ದತೆಯ ವಾತಾವರಣ ಕಲುಷಿತವಾಗಿತ್ತು.  ಆರ್ಥಿಕ ಶಿಸ್ತಿಗೆ ಬದ್ಧವಾಗಿದ್ದ ಕರ್ನಾಟಕದಲ್ಲಿ ವಿತ್ತೀಯ ಶಿಸ್ತು ಅಪಾಯದ ಅಂಚಿನಲ್ಲಿತ್ತು.  ದಕ್ಷ ಆಡಳಿತಕ್ಕೆ ಹೆಸರಾಗಿದ್ದ ಕರ್ನಾಟಕದ ಖ್ಯಾತಿ ಮಸುಕಾಗುತ್ತಿತ್ತು.  ರಾಜ್ಯದ ಸ್ಥಿರ ರಾಜಕೀಯ ಅಸ್ಥಿರತೆಯ ಅಂಚಿಗೆ ಬಂದು ನಿಂತಿತ್ತು.

       ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರು ಈ ಸವಾಲುಗಳನ್ನು ದಿಟ್ಟತನದಿಂದಲೇ ಸ್ವೀಕರಿಸಿದರು.  ತಮ್ಮ ಸುದೀರ್ಘ ರಾಜಕೀಯದ ಅನುಭವಗಳನ್ನು ಅಡಿಗಲ್ಲನ್ನಾಗಿಟ್ಟುಕೊಂಡು ಕರ್ನಾಟಕದ ಅಭಿವೃದ್ಧಿ ಸೌಧ ನಿರ್ಮಿಸಲು ಸಂಕಲ್ಪ ತೊಟ್ಟರು.  ಪ್ರಮಾಣವಚನ ಸ್ವೀಕರಿಸಿದ ಮರುಘಳಿಗೆಯಲ್ಲಿಯೇ ರಾಜ್ಯದ ಶಕ್ತಿ ವಿಧಾನಸೌಧದ ಮೂರನೇ ಮಹಡಿಯ ಸಚಿವ ಸಂಪುಟ ಸಭಾಂಗಣಕ್ಕೆ ಎದೆಯುಬ್ಬಿಸಿ ನಡೆದರು.  ನಾಡಿನ ಜನತೆಯ ಒಳಿತನ್ನೇ ಉಸಿರಾಗಿಸಿಕೊಂಡಿದ್ದ ತಮ್ಮ ಮಾತೃ ಹೃದಯದಿಂದ ಬಡ ಜನತೆಯ ಮೇಲೆ ಮಮತೆಯ ಮಹಾಪೂರವನ್ನೇ ಹರಿಸಿದರು.  ಬಡಜನರ ಸಂಕಷ್ಟ ನಿವಾರಿಸುವ ದಿಟ್ಟ ನಿರ್ಧಾರಗಳನ್ನು ಪ್ರಕಟಿಸಿದರು.  ನಾಡಿನ ಇತಿಹಾಸದಲ್ಲಿಯೇ ಮೊದಲಬಾರಿಗೆ ಏಕಸಚಿವ ಸಂಪುಟ ಸಭೆ ನಡೆಸಿ ಅನ್ನಭಾಗ್ಯ, ಕ್ಷೀರಧಾರೆ, ಋಣಮುಕ್ತ, ವಸತಿ ಭಾಗ್ಯ …. ಇತ್ಯಾದಿ ಜನಪರ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದರು.

       ಸಿದ್ದರಾಮಯ್ಯನವರ ಈ ದಿಟ್ಟ ನಡೆಯನ್ನು ನೋಡಿ ನಾಡಿನ ಜನತೆ ಹುಬ್ಬೇರಿಸಿತು.  ಹಲವರು ಅನುಮಾನ ವ್ಯಕ್ತಪಡಿಸಿದರು.  ಕೆಲವರು ಕುಹಕವಾಡಿದರು.  ಇಂತಹ ಜನಾನುರಾಗಿ ಯೋಜನೆಗಳ ಮೂಲಕ ಇವರು ಬೊಕ್ಕಸವನ್ನೇ ಬರಿದುಗೊಳಿಸುತ್ತಾರೆ ಎಂದರು.  ಆದರೆ ಸಿದ್ದರಾಮಯ್ಯನವರು ಈ ಕುಹಕದ ಮಾತುಗಳಿಂದ ಎದೆಗುಂದಲಿಲ್ಲ.  ತಮ್ಮ ನುಡಿಗಳನ್ನು ನಡೆಯಲ್ಲಿ ತೋರಿಸಿದರು.  ನುಡಿದಂತೆ ನಡೆದಿದ್ದೇವೆ ಎನ್ನುವ ಘೋಷವಾಕ್ಯವನ್ನೇ ರಚಿಸಿ ಅದರಂತೆ ನಡೆದರು. 

       ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಮಗೆ ಸರ್ಕಾರಿ ಯೋಜನೆಗಳಲ್ಲ, ಅಂಕಿ-ಅAಶಗಳ ಲೆಕ್ಕವೂ ಅಲ್ಲ, ಸಾಧನೆಯ ಪಟ್ಟಿಯೂ ಅಲ್ಲ, ಅದು ನಮ್ಮ ಬದ್ಧತೆ, ಕರ್ತವ್ಯ ಮತ್ತು ಕಾಳಜಿ. ರಾಜಕೀಯ ಪಕ್ಷಗಳು ಚುನಾವಣಾ ಕಾಲದಲ್ಲಿ ಪ್ರಕಟಿಸುವ ಪ್ರಣಾಳಿಕೆಗೂ, ಅಧಿಕಾರಕ್ಕೆ ಬಂದ ನಂತರ ನಡೆಸುವ ಆಡಳಿತಕ್ಕೂ ಸಂಬAಧವೇ ಇರುವುದಿಲ್ಲವೆಂಬ ಆರೋಪವಿದೆ.  ಈ ಆರೋಪದ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು.  ಪ್ರಣಾಳಿಕೆ ಕೇವಲ ಪ್ರಚಾರ ಕರಪತ್ರವಲ್ಲ, ಅದೊಂದು ಬದ್ಧತೆ.  ಚುನಾವಣಾ ಸಂದರ್ಭದಲ್ಲಿ ಹೇಳಿದರೆ, ಅದನ್ನು ಆಡಳಿತದಲ್ಲಿ ಮಾಡಿ ತೋರಿಸಬೇಕು.

                             ಮೊದಲ ಆದೇಶ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯನವರು ಆಗಲೇ ನುಡಿದಂತೆ?ನಡೆಯಬೇಕು?? ಎಂಬ ಸಂಕಲ್ಪವನ್ನು ಮಾಡಿಬಿಟ್ಟಿದ್ದರು. ಚುನಾವಣಾ ಕಾಲದಲ್ಲಿ ಪಕ್ಷ ಪ್ರಕಟಿಸುವ ಪ್ರಣಾಳಿಕೆ ಕೇವಲ ಕಾಗದಗಳ ಕಂತೆಯಾಗಿ ಕಳೆದುಹೋಗಲು ಬಿಡಬಾರದು, ಅದು ಅಧಿಕಾರದ ದಿನಗಳಲ್ಲಿ ಸರ್ಕಾರಕ್ಕೆ ಮಾರ್ಗದರ್ಶಿಯಾಗಬೇಕು ಎಂದು ಅವರು ನಿರ್ಧರಿಸಿದ್ದರು. ಅದರ ಫಲವಾಗಿಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ, ಕ್ಷೀರಭಾಗ್ಯ ಮತ್ತು ದಲಿತ,ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸಾಲ ಮನ್ನಾ, ಕಾರ್ಯಕ್ರಮಗಳನ್ನು ಘೋಷಿಸಿದರು.

ರೈತ ಕುಟುಂಬದಿAದ ಬಂದ ಸಿದ್ದರಾಮಯ್ಯನವರು ಅಪ್ಪಟ ಹಳ್ಳಿಹೈದ.  ತನ್ನ ಸುತ್ತಲಿನ ಬಡತನ, ಅನಕ್ಷರತೆ, ಶೋಷಣೆ, ಮೂಢನಂಬಿಕೆ, ಜನರ ಸಂಕಷ್ಟ, ನೋವು-ನಲಿವುಗಳನ್ನು ಕಣ್ಣಾರೆ ಕಂಡವರು.  ಅವರೇ ಹೇಳಿಕೊಳ್ಳುವಂತೆ, ಬಹುಶ: ?ಇಂಥ ದು:ಸ್ಥಿತಿಯ ವಾತಾವರಣ ನನ್ನೊಳಗೆ ನೋವು, ಸಿಟ್ಟು ಹೆಪ್ಪುಟ್ಟದೆ ಹೋಗಿದ್ದರೆ, ಬಹುಶ: ನಾನು ರಾಜಕೀಯಕ್ಕೆ ಬರುತ್ತಿರಲಿಲ್ಲ?, ಇವುಗಳೆಲ್ಲಾ ಕಣ್ಣೆದುರಿಗೆ ಬಂದಾಗ, ಈ ಸಾಮಾಜಿಕ ಸ್ಥಿತಿ ಯಾವ ತೆರನದು? ಅದರ ಫಲಾನುಭವತೆ ಯಾವ ಸ್ವರೂಪದ್ದು? ಈ ಸಾಮಾಜಿಕ ನ್ಯಾಯ ಸ್ಥಿರತೆಗೊಳಿಸುವುದು ಹೇಗೆ? ನೊಂದವರ, ಶೋಷಿತರ, ಬಡವರ ಮಡಿಲಿಗೆ ತಲುಪಿಸುವುದು ಹೇಗೆ? ಸಮಸಮಾಜ ನಿರ್ಮಾಣದ ಬಗೆಗೆ ಅವರ ಮನ ಸದಾ ತುಡಿಯುತ್ತಲೇ ಇತ್ತು.

       ರಾಮ ಮನೋಹರ ಲೋಹಿಯಾ, ಅಂಬೇಡ್ಕರ್, ಗಾಂಧೀಜಿಯವರ ಚಿಂತನೆಗಳಿAದ ಪ್ರಭಾವಿತ ರಾಗಿದ್ದ ಇವರು, ಪ್ರೊ: ಎಂ.ಡಿ. ನಂಜುAಡಸ್ವಾಮಿಯವರ ಪ್ರೇರಣೆ, ಮಾರ್ಗದರ್ಶನದಿಂದ ನಾನು ರಾಜಕೀಯ ಪ್ರವೇಶ ಮಾಡಿದೆ, ಎಂಬ ಅವರ ದಿಟ್ಟ ನಿಲುವನ್ನು ಪ್ರಶ್ನಿಸಿದವರು ಉಂಟು.  `ಲೋಹಿಯಾ ಅವರ ವಿಚಾರಗಳಿಂದ ಪ್ರಭಾವಿತರಾದ ನೀವು, ಕಾಂಗ್ರೆಸ್ ಪಕ್ಷ ಸೇರಿದ್ದು ಹೇಗೆ? ಎಂಬ ಪ್ರಶ್ನೆಗೆ ಬಹಳ ಚಾಣಾಕ್ಷತನದಿಂದ ಅವರು ಉತ್ತರ ನೀಡಿದರು: ಲೋಹಿಯಾ ಕಾಂಗ್ರೆಸ್ ವಿರೋಧಿಯೇ ಇರಬಹುದು, ಆದರೆ ಅವರ ಬಹುತೇಕ ಚಿಂತನೆಗಳನ್ನೆಲ್ಲಾ ಜಾರಿಗೆ ತಂದಿರುವುದು ಕಾಂಗ್ರೆಸ್.  ಭೂ ಸುಧಾರಣೆ, ಮೀಸಲಾತಿ, ಅಧಿಕಾರ ವಿಕೇಂದ್ರೀಕರಣ ಇದೆಲ್ಲಾ ಕಾಂಗ್ರೆಸ್ ಮಾಡಿರುವ ಕೆಲಸಗಳು.

       ರಾಜಕೀಯ ಸ್ವಾತಂತ್ರ್ಯದ ಜೊತೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ÷್ಯ ನೀಡಿದರೆ ಮಾತ್ರ, ನೈಜ ಪ್ರಜಾಪ್ರಭುತ್ವ ಸ್ಥಾಪನೆ ಸಾಧ್ಯ, ಎಂಬ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ: ಬಿ.ಆರ್.ಅಂಬೇಡ್ಕರ್ ಅವರ ಆಶಯ ನನ್ನದು.

      ಆರಂಕುಷಮಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ ಇದು ಕನ್ನಡ ಆದಿಕವಿ ಪಂಪ ತನ್ನ  ನೆಚ್ಚಿನ ನೆಲೆಯಾದ ಬನವಾಸಿಯನ್ನು ಕುರಿತು ಆಡಿದ ಮಾತು.  ಕರ್ನಾಟಕವನ್ನು ತಮ್ಮ ಕರ್ಮಭೂಮಿ ಯನ್ನಾಗಿಸಿಕೊಂಡ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಆಶಯದ ಮಾತುಗಳನ್ನು ಹಲವಾರು ಸಂದರ್ಭಗಳಲ್ಲಿ ಆಡಿದ್ದಾರೆ.  ಕರ್ನಾಟಕವೇ ನನ್ನ ಕರ್ಮಭೂಮಿ, ಕನ್ನಡವೇ ನನ್ನ ಉಸಿರು; ನಾಡು ನುಡಿಯ ಸಂರಕ್ಷಣೆಯೆ ನನ್ನ ಧ್ಯೇಯ; ಸಾಮಾಜಿಕ ನ್ಯಾಯವೇ ನನ್ನ ಆದ್ಯತೆ; ಬಡವರ ಅಭ್ಯುದಯವೇ ನನ್ನ ಪರಮಗುರಿ ಹೀಗೆ ಅವರ ಸದಾಶಯಗಳ ಸರಣಿ ಸಾಗುತ್ತದೆ.    

     ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ  60ನ್ನು ತಮ್ಮ ಮೊದಲ ಬಜೆಟ್ನಲ್ಲಿಯೇ ಈಡೇರಿಸಿದರು. ಎರಡನೇ ಬಜೆಟ್ನಲ್ಲಿ ಪ್ರಣಾಳಿಕೆಯಲ್ಲಿನ ಇನ್ನೂ 30 ಭರವಸೆಗಳನ್ನು ಈಡೇರಿಸಿದರು. ಉಳಿದ ಭರವಸೆಗಳನ್ನು ತಮ್ಮ ಕೊನೆಯ ನಾಲ್ಕು ಬಜೆಟ್ ಗಳಲ್ಲಿ ಜಾರಿಗೆ ತಂದು ನುಡಿದಂತೆ ನಡೆದವರು ಎಂಬ ಖ್ಯಾತಿ ಪಡೆದವರು. ಇದು ಶ್ರೀ ಸಿದ್ದರಾಮಯ್ಯನವರ ಜನಪರ ಧೋರಣೆ, ಬಡವರ ಕಲ್ಯಾಣದ ಬಗ್ಗೆ ಬದ್ದತೆ ಮತ್ತು ಪ್ರಾಮಾಣಿಕ ನಡವಳಿಕೆಗೆ ಸಾಕ್ಷಿ. ದಕ್ಷತೆ ಮತ್ತು ಪ್ರಾಮಾಣಿಕತೆ ಶ್ರೀ ಸಿದ್ದರಾಮಯ್ಯನವರ ವ್ಯಕ್ತಿತ್ವದ ಹೆಗ್ಗುರುತುಗಳು.

     2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ? ಕೆಲಸ ಮಾಡಿದ್ದೇವೆ ಕೂಲಿ ಕೊಡಿ? ಎಂದು ರಾಜ್ಯದ ಮತದಾರರ ಮುಂದೆ ಬೊಗಸೆಯೊಡ್ಡಿ ಕೇಳಿದ್ದರು. ಅನ್ನ,ಹಾಲು, ಅಕ್ಷರು, ನೀರು, ಮನೆ, ಔಷಧಿ ಕೊಟ್ಟವರನ್ನು ಜನ ಮರೆಯುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. ಆದರೆ ಆ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದರು. 80 ಸ್ಥಾನಗಳಲ್ಲಿಯಷ್ಟೇ ಕಾಂಗ್ರೆಸ್ ಪಕ್ಷ ಗೆದ್ದಿದ್ದರೂ ಬಿಜೆಪಿಗಿಂತ ಶೇಕಡಾ ಎರಡರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ನೀಡಿದ್ದರು.

       ಅಲ್ಲಿಂದ ಸಿದ್ದರಾಮಯ್ಯನವರ ಇನ್ನೊಂದು ಹೋರಾಟ ಶುರುವಾಯಿತು. ಪಕ್ಷದ ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆಗಿನ ಮೈತ್ರಿಸರ್ಕಾರಕ್ಕೆ ಒಪ್ಪಿಕೊಂಡರು.ಆದರೆ ಜೆಡಿ ಎಸ್ ಪಕ್ಷದಿಂದ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರನ್ನು ನಿರ್ಲಕ್ಷಿಸುತ್ತಿದ್ದಾರೆಂಬ ದೂರುಗಳು ನಿರಂತರವಾಗಿ ಬಂದರೂ ತಾಳ್ಮೆಯಿಂದ ಇರುವಂತೆ ಮನವೊಲಿಸುತ್ತಾ ಬಂದರು. ಕೊನೆಗೆ ಬಿಜೆಪಿಯ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ಹದಿನೇಳು ಶಾಸಕರು ಬಲಿಯಾಗುವುದರೊಂದಿಗೆ ಸಮ್ಮಿಶ್ರ ಸರ್ಕಾರ ಪತನವಾಯಿತು.

      ನಿರೀಕ್ಷೆಯಂತೆಯೇ ಸಿದ್ದರಾಮಯ್ಯನವರು ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದರು. ಕಳೆದ ಮೂರು ವರೆ ವರ್ಷಗಳಲ್ಲಿ ಈ ವಯಸ್ಸಿನಲ್ಲಿಯೂ ವಾರದಲ್ಲಿ ಐದರಿಂದ ಆರು ದಿನಗಳ ಕಾಲ ರಾಜ್ಯದಾದ್ಯಂತ ಪ್ರವಾಸ ಮಾಡಿ ಬಿಜೆಪಿಯ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ದ ಜನಜಾಗೃತಿ ಗೊಳಿಸಿದರು. ಕೊರೊನಾ ರೋಗಕ್ಕೆ ತಾನೇ ಒಳಗಾದರೂ ಕೂಡಾ ಅವರು ಮನೆಯೊಳಗೆ ಕೂರಲಿಲ್ಲ. ಸದನದ ಒಳಗೆ ಮತ್ತು ಹೊರಗೆ ಅವರು ನಡೆಸಿದ ಹೋರಾಟದಿಂದ ತತ್ತರಿಸಿ ಹೋದ ಬಿಜೆಪಿ ಅವರನ್ನೇ ಗುರಿಯಾಗಿಟ್ಟುಕೊಂಡು ರಾಜಕೀಯವಾಗಿ ಮಾತ್ರವಲ್ಲ ವೈಯಕ್ತಿಕವಾಗಿಯೂ ದಾಳಿ ಮಾಡಲಾರಂಭಿಸಿತು. ಆದರೆ ಸಿದ್ದರಾಮಯ್ಯನವರು ಹಿಮ್ಮೆಟ್ಟಲಿಲ್ಲ.

      ಕೊರೊನಾ ಕಾಲದ ಭ್ರಷ್ಟಾಚಾರ, 40% ಕಮಿಷನ್, ಪೇಸಿಎಂ, ಪಿಎಸ್ ಐ ನೇಮಕಾತಿ ಅಕ್ರಮ, ಅಮುಲ್ ?ನಂದಿನಿ ವಿವಾದ ಹೀಗೆ ಒಂದೊAದು ಹಗರಣಗಳನ್ನು ಊರೂರು ಸುತ್ತಿ ಬಯಲಿಗೆಳೆಯುತ್ತಾ ಬಂದ ಸಿದ್ದರಾಮಯ್ಯನವರು ಬಿಜೆಪಿ ನಾಯಕರ ನಿದ್ದೆಗೆಡಿಸಿಬಿಟ್ಟಿದ್ದರು. ಕೇವಲ ಬಿಜೆಪಿಯ ವೈಫಲ್ಯಗಳನ್ನು ಎತ್ತಿ ತೋರಿಸುವ ಜೊತೆಯಲ್ಲಿಯೇ ತನ್ನ ಐದು ವರ್ಷಗಳ ಆಡಳಿತದ ಸಾಧನೆಗಳನ್ನು ಹೇಳುತ್ತಾ ಜನರಿಗೆ ಪರ್ಯಾಯವನ್ನು ತೋರಿಸುತ್ತಾ ಬಂದದ್ದು ಸಿದ್ದರಾಮಯ್ಯನವರ ವೈಶಿಷ್ಟೆ. ಸಶಕ್ತ ನಾಯಕ ಮತ್ತು ಸುಭದ್ರ ಸರ್ಕಾರವನ್ನು ತಮ್ಮಿಂದ ಮಾತ್ರ ಕೊಡಲು ಸಾಧ್ಯ ಎಂದು ಜನತೆಗೆ ಮನವರಿಕೆ ಮಾಡಿಕೊಟ್ಟಿರುವ ಪರಿಣಾಮವೇ ಈ ವಿಧಾನಸಭಾ ಚುನಾವಣೆಯ ಫಲಿತಾಂಶ.

      ಈಗ ಆರುವರೆ ಕೋಟಿ ಕನ್ನಡಿಗರ ನಿರೀಕ್ಷೆಯಂತೆಯೇ ಸಿದ್ದರಾಮಯ್ಯನವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಕರ್ನಾಟಕದ ನಿಜವಾದ ಸರ್ವಜನಾಂಗಗಳ ಶಾಂತಿಯ ತೋಟ ಆಗಲಿದೆ. ಸರ್ವಜನಪ್ರಿಯ ಸರ್ಕಾರ ರಾಜ್ಯದ ಅಭಿವೃದ್ದಿಯ ಭಾಗ್ಯದ ಬಾಗಿಲು ತೆರೆಯಲಿದೆ.ಇಂತಹ ಮುಖ್ಯಮಂತ್ರಿಗಳ ಆಡಳಿತದಲ್ಲಿ ಕರ್ನಾಟಕ ಸುರಕ್ಷಿತ ಹಸ್ತದಲ್ಲಿದೆ ಎಂದು ತಿಳಿದುಕೊಂಡು ನಾಡಿನ ಜನತೆ ನೆಮ್ಮದಿಯಾಗಿರಬಹುದು.

ಕುಟುಂಬ

       ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಗೃಹಿಣಿ. ಹಿರಿಯ ಪುತ್ರ ದಿ.ರಾಕೇಶ್ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಹಠಾತ್ ಅನಾರೋಗ್ಯದಿಂದ ಅವರು ನಿಧನ ಹೊಂದಿದ ಮೇಲೆ ವೃತ್ತಿಯಿಂದ ವೈದ್ಯರಾದ ಕಿರಿಯ ಪುತ್ರ ಡಾ. ಎಸ್ ಯತೀಂದ್ರ ಅವರು ರಾಜಕೀಯ ರಂಗ ಪ್ರವೇಶಿಸಿದರು. ಪ್ರಸ್ತುತ ಯತೀಂದ್ರ ಅವರು ತಂದೆಯವರಿಗೆ ರಾಜಕೀಯದಲ್ಲಿ ನೆರವಾಗುತ್ತಿದ್ದಾರೆ.

      ಸಿದ್ದರಾಮಯ್ಯ ಅವರು ವೇದಿಕೆಯಲ್ಲಿ ಮಾತಿಗೆ ನಿಂತರೆ ಅಪ್ಪಟ ಮೈಸೂರು ಸೀಮೆಯ ಗ್ರಾಮ ಭಾಷೆ ಹೊರಹೊಮ್ಮುತ್ತದೆ. ಆ ಶೈಲಿಯಲ್ಲಿಯೇ ಭಾಷಣ ಮಾಡಿ ಸಭಿಕರನ್ನು ಸೂಜಿಗಲ್ಲಿನಂತೆ ಸೆಳೆಯುವ ಶಕ್ತಿ ಶ್ರೀ ಸಿದ್ದರಾಮಯ್ಯ ಅವರಿಗೆ ಇದೆ. ಅವರ ಮಾತು ಒರಟು, ಆದರೆ ಮನಸ್ಸು ಮಾತ್ರ ಮೃದು. ಈ ಕಾರಣಕ್ಕಾಗಿಯೇ ಸಿದ್ದರಾಮಯ್ಯ ನವರಿಗೆ ದೊಡ್ಡ ಅಭಿಮಾನಿ ಬಳಗವೇ ಇದೆ.

ಆಸಕ್ತಿಯ ಕ್ಷೇತ್ರಗಳು

      ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸದ ನಂತರವೂ ಅವರೊಳಗಿನ ಸಿದ್ರಾಮನಹುಂಡಿ ಸಿದ್ರಾಮಣ್ಣ ಮಾತ್ರ ಬದಲಾಗಲೆ ಇಲ್ಲ. ಅವರಿಗೆ ವೀರಗಾಸೆ ಕುಣಿತ(ಜಾನಪದ ನೃತ್ಯ ಶೈಲಿ) ಎಂದರೆ ಅತ್ಯಂತ ಅಚ್ಚುಮೆಚ್ಚು. ಪ್ರತೀ ವರ್ಷ ಹಳ್ಳಿಯಲ್ಲಿ ಏರ್ಪಡಿಸುವ ಹಬ್ಬಕ್ಕೆ ತಪ್ಪದೆ ಭಾಗವಹಿಸುವ ಜೊತೆಗೆ ಹಳ್ಳಿಯವರೊಂದಿಗೆ ನೃತ್ಯದಲ್ಲಿ ಹೆಜ್ಜೆ ಹಾಕುತ್ತಾರೆ. ಬೋಡಾ ಸಾಂಬಾರು, ನಾಟಿ ಕೋಳಿ ಸಾರು ಮತ್ತು ರಾಗಿಮುದ್ದೆ ಅವರ ನೆಚ್ಚಿನ ಖಾದ್ಯಗಳು.

ತುಮಕೂರು

     ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಬಾಲ್ಯ…

    ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು, ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಡಿ.ಕೆ.ಶಿವಕುಮಾರ್ 15ನೇ ಮೇ, 1962ರಂದು ಜನಿಸಿದರು.ತಮ್ಮ 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್ಯುಐಗೆ ಸೇರ್ಪಡೆಯಾದರು.

 

ಶಿಕ್ಷಣ…

     ವಿದ್ಯಾಭ್ಯಾಸಕ್ಕೆಂದು ಶಿವಕುಮಾರ್ ಬೆಂಗಳೂರಿಗೆ ಬಂದರು. ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು .ಮುಕ್ತಾ ವಿಶ್ವವಿದಾಲಯದಲ್ಲಿ ರಾಜಕೀಯ ಶಾಸ್ತç ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ರಾಜಕೀಯ…

    1985ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋತರು. ಚುನಾವಣೆಯಲ್ಲಿ ದೇವೇಗೌಡರಿಗೆ ಸಾಕಷ್ಟು ಪ್ರಬಲ ಪ್ರತಿರೋಧ ತೋರಿದರು.

    1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು.

    1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮೂಲಕ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು.

     1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿ ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದರಲ್ಲಿ ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಬಂಗಾರಪ್ಪ ಶಿವಕುಮಾರ್ಗೆ ಬಂಧಿಖಾನೆ ಸಚಿವ ಸ್ಥಾನ ನೀಡಿದರು.

   1994ರಲ್ಲಿ ಪಕ್ಷ ಟಿಕೆಟ್ ನೀಡಲಿಲ್ಲ. ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿದರು.

      ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕೆಲಸ ಮಾಡಿದರು. ಸಹಕಾರ ಸಚಿವರಾಗಿ, ನಗರಾಭಿವೃದ್ಧಿ ಖಾತೆ ಮತ್ತು ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದರು.(1999-2002).2004ರಲ್ಲಿ ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರು. ಈ ವೇಳೆ ಪಕ್ಷ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು.

     2008ರಲ್ಲಿ ಮತ್ತೆ ಶಿವಕುಮಾರ್ ಶಾಸಕರಾದರು. ಈ ವೇಳೆ ಬಿಜೆಪಿ ಅಧಿಕಾರ ಪಡೆಯಿತು.2013ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರ ಪಡೆಯಿತು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರು. ಇಂಧನ ಸಚಿವರಾಗಿ ಕೆಲಸ ಮಾಡಿದರು.2018ರಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತ ಪಡೆಯಲಿಲ್ಲ. ಈ ವೇಳೆ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತು. ಜೆಡಿಎಸ್ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಈ ವೇಳೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾದರು. ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿತು.

     2023ರಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರ ಗದ್ದುಗೆ ಹಿಡಿದಿದೆ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದು, ಶಿವಕುಮಾರ್ ಉಪಮುಖ್ಯಮಂತ್ರಿಯಾಗುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap