ಸಿದ್ದರಾಮಯ್ಯ ಅವರನ್ನು ಕೆಣಕಿದ ಸತೀಶ್ ಜಾರಕಿಹೊಳಿ

ಬೆಂಗಳೂರು:

      ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿರುವ ಹಿರಿಯ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ, ಇದೇ ಕಾಲಕ್ಕೆ ಬಾದಾಮಿಯಲ್ಲಿ ನಮ್ಮ ಸಾಮಥ್ರ್ಯ ತೋರಿಸಿದ್ದೇವೆ ಎಂದು ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.

      ಈ ಮೂಲಕ ಬಾದಾಮಿ ಚುನಾವಣೆಯಲ್ಲಿ ಅತಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ ಅವರನ್ನು ಸತೀಶ್ ಜಾರಕಿಹೊಳಿ ಕೆಣಕಿದ್ದಾರೆ.

     ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡದ, ಅಥವಾ ಪಕ್ಷದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅಸಮಾಧಾನ ಕುರಿತಂತೆ ಚರ್ಚಿಸುವ ಸಭೆಯಿಂದ ದೂರ ಉಳಿದ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

      ಮೇಲ್ಮನೆ ಚುನಾವಣೆ ಸಂಬಂಧ ನಮ್ಮ ಪಕ್ಷದ ಮುಖಂಡರು ದೆಹಲಿಗೆ ತೆರಳಿದ್ದಾರೆ. ನಾನು ಪ್ರತ್ಯೇಕವಾಗಿ ಹೋಗುತ್ತೇನೆ. ನಮ್ಮ ಸಮಸ್ಯೆ ಸರ್ಕಾರಕ್ಕೆ ಸಂಬಂಧಿಸಿದ್ದೇ ಹೊರತು ಪಕ್ಷಕ್ಕೆ ಅಲ್ಲ. ನಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಕುರಿತು ನಮಗೆ ಅಸಮಾಧಾನವಾಗಿರುವುದು ನಿಜ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೂ ಈ ಬಗ್ಗೆ ತಿಳಿದಿದೆ. ಈ ಬಗ್ಗೆ ದೆಹಲಿ ವರಿಷ್ಠರೊಂದಿಗೆ ಚರ್ಚಿಸುತ್ತೇನೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೂ ನಮ್ಮ ಜಿಲ್ಲೆಯ ಸಮಸ್ಯೆ ತಿಳಿದಿದೆ ಎಂದರು.

                   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link