ಸುಮಲತಾ ಪರ ಬಿಎಸ್ವೈ ಪ್ರಚಾರ!

ಚಿತ್ರದುರ್ಗ :

      ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾಗೆ ಈಗಾಗಲೇ ಬಿಜೆಪಿ ಬೆಂಬಲ ಸೂಚಿಸಿದ್ದು, ಸುಮಲತಾ ಪರ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

     ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಷ್‌ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದ್ದು, ಸುಮಲತಾ ಪರ ಪ್ರಚಾರವನ್ನೂ ಸಹಾ ಮಾಡಲು ಹೋಗುತ್ತಿದ್ದೇನೆ ನನ್ನ ಜೊತೆಗೆ ಪಕ್ಷದ ಕೆಲವು ಹಿರಿಯ ನಾಯಕರು ಕೂಡ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

     ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದು ಪಕ್ಕಾ ಆಗುತ್ತಿದ್ದಂತೆ ಬಿಜೆಪಿ ಹಿರಿಯ ನಾಯಕ ಎಸ್​.ಎಂ.ಕೃಷ್ಣ  ಹಾಗೂ ಬಿಎಸ್​ ಯಡಿಯೂರಪ್ಪ ಅವರನ್ನ ಸುಮಲತಾ ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಇಂದು ಬಿಎಸ್ವೈ ಸುಮಲತಾ ಪರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap