ನವದೆಹಲಿ:
ಡಿಆರ್ಡಿಒ ಮತ್ತು ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಪತ್ರಕರ್ತನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿವೇಕ್ ರಘುವಂಶಿ ಎಂಬಾತನ ವಿರುದ್ಧ ಅಧಿಕಾರಿಗಳ ರಹಸ್ಯ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಘುವಂಶಿ ಡಿಆರ್ಡಿಒ ಮತ್ತು ಸೇನೆಯ ಯೋಜನೆಗಳ ‘ಸೂಕ್ಷ್ಮ’ ಮತ್ತು ‘ಅತಿಸೂಕ್ಷ್ಮ’ ವಿವರಗಳನ್ನು ಸಂಗ್ರಹಿಸಿದ್ದಾರೆ ಮತ್ತು ಅವುಗಳನ್ನು ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
![](https://prajapragathi.com/wp-content/uploads/2023/05/cbi.jpg)