ಹಲವಾರು ಮಹನೀಯರ ಬಲಿದಾನ, ತ್ಯಾಗಗಳ ಫಲವಾಗಿ ಸ್ವಾತಂತ್ರ್ಯ ಪಡೆದಿದ್ದೇವೆ

 ಹಿರಿಯೂರು :

      ಈ ದೇಶಕ್ಕೆ ಮಹಾತ್ಮಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಸತ್ಯ, ಅಹಿಂಸೆ, ಪ್ರಮಾಣಿಕತೆಯ ಹೋರಾಟಗಳಿಂದ ಹಾಗೂ ಹಲವಾರು ಮಹನೀಯರ ಬಲಿದಾನ, ತ್ಯಾಗಗಳ ಫಲವಾಗಿ ಸ್ವಾತಂತ್ರ್ಯ ಪಡೆದಿದ್ದೇವೆ. ಈ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧೀಜಿಯವರ ಜೊತೆ ಜವಹರ್‍ಲಾಲ್‍ನೆಹರು, ಸುಭಾಸ್‍ಚಂದ್ರಬೋಸ್, ಲಾಲ್‍ಬಹದ್ದೂರ್‍ಶಾಸ್ತ್ರಿ ಸೇರಿದಂತೆ ಅನೇಕ ಮಹನ್‍ನಾಯಕರುಗಳ ಹೋರಾಟದ ಫಲವಾಗಿ 1947ರ ಆಗಸ್ಟ್ 15ರಂದು ನಮ್ಮೆಲ್ಲರಿಗೂ ಸ್ವಾತಂತ್ರ್ಯ ದೊರೆಯಿತು. ಈ ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ಜನರ ಕಣ್ಣೀರಿದೆ. ನಮ್ಮ ಪೂರ್ವಜರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ರಕ್ಷಿಸಿಕೊಳ್ಳುವುದು ನಮ್ಮೆಲ್ಲರುಗಳ ಆದ್ಯ ಕರ್ತವ್ಯವಾಗಿದೆ ಎಂಬುದಾಗಿ ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ ಹೇಳಿದರು.

      ನಗರದ ತಾಲ್ಲೂಕು ಯುವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ, 72ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ ಅವರು ಮಾತನಾಡುತ್ತಿದ್ದರು.

      ಈ ಸ್ವಾತಂತ್ರ್ಯದ ಮೂಲ ಉದ್ದೇಶಕ್ಕೆ ಧಕ್ಕೆಯಾಗದಂತೆ ನಾವುಗಳೆಲ್ಲಾ ದೇಶದ ಭದ್ರತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಬೇಕು. ಸಾಮಾಜಿಕ ನ್ಯಾಯ, ಸಮಾನತೆ, ಕೋಮು ಸೌಹಾರ್ದತೆ, ಸರ್ವರಿಗೂ ಶಿಕ್ಷಣ, ವಿವಿಧತೆಯಲ್ಲಿ ಏಕತೆ, ಸಹಭಾಳ್ವೆ, ಸರ್ವರಿಗೂ ಸಮಪಾಲು, ಮುಂತಾದ ಆದರ್ಶ ಮೌಲ್ಯಗಳನ್ನು ಸಾಕಾರಗೊಳಿಸಲು ರೂಪವಾಗಿರುವ ಮತ್ತು ಸ್ವಾತಂತ್ರ್ಯದ ಆಶಯಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ. ದೇಶದ ಸಮಗ್ರತೆಗೆ ಭಂಗ ತರುವಂಥ ದುಷ್ಟಶಕ್ತಿಗಳ ವಿರುದ್ಧ ಸಂಘಟಿತ ಹೋರಾಟಮಾಡ ಬೇಕಿದೆ. ಅಭಿವೃದ್ಧಿಗೆ ಮಾರಕವಾಗಿರುವ ಭಯೋತ್ಪಾದಕತೆಯನ್ನು ತಡೆಗಟ್ಟಬೇಕಾಗಿದೆ ಎಂಬುದಾಗಿ ಅವರು ಹೇಳಿದರು.

      ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಈ 72ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಈ ರಾಷ್ಟ್ರದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು ಈ ಸಂದರ್ಭದಲ್ಲಿ ಈ ಸ್ವಾತ್ರ್ಯಂತ್ರಕೋಸ್ಕರ ತ್ಯಾಗ ಬಲಿದಾನ ಮಾಡಿದ ಮಹಾತ್ಮರನ್ನು ನೆನೆಯಬೇಕಿದೆ ಅಲ್ಲದೆ ಅವರ ಮಾರ್ಗದರ್ಶನದಲ್ಲಿ ನಮ್ಮ ಯುವ ಜನತೆ ಸಾಗಬೇಕಿದೆ, ಇಂದಿನ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ರಾಷ್ಟ್ರಪ್ರೇಮವನ್ನು ಮಕ್ಕಳ ಪೋಷಕರು ಹಾಗೂ ಶಿಕ್ಷಕರು ಬೆಳೆಸಬೇಕಾಗಿದೆ ಎಂದರು.

      ಈ ದೇಶದಲ್ಲಿ ಮಹಾತ್ಮಗಾಂಧೀಜಿಯವರ ಗ್ರಾಮಸ್ವರಾಜ್ಯದ ಆದರ್ಶದ ಕನಸುಗಳಾದ ಸಾಮಾಜಿಕನ್ಯಾಯ, ಸಮಾನತೆ, ಕೋಮುಸೌಹಾರ್ದತೆ, ಸರ್ವರಿಗೂ ಶಿಕ್ಷಣ, ಸಹಜೀವನ, ಸಹಬಾಳ್ವೆ, ಸರ್ವರಿಗೂ ಸಮಪಾಲು ಮುಂತಾದ ಆದರ್ಶ ಮೌಲ್ಯಗಳ ಸಾಕಾರ ರೂಪವಾಗಿರುವ ಸ್ವಾತಂತ್ರ್ಯದ ಆಶಯಗಳನ್ನು ಈಡೇರಿಸಲು ನಾವೆಲ್ಲಾ ಶ್ರಮಿಸಬೇಕಾಗಿದೆ ಎಂದರು.

      ಇದೇ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ನಿವೃತ್ತ ಸೈನಿಕರನ್ನು ರಾಜ್ಯ ಪ್ರಶಸ್ತಿ ಪುರಸ್ಕøತ ಶಿಕ್ಷಕರನ್ನು ತಾಲ್ಲೂಕು ಆಡಳಿತದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.

      ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಟಿ.ಚಂದ್ರಶೇಕರ್, ಉಪಾಧ್ಯಕ್ಷೆ ಶ್ರೀಮತಿ ಇಮ್ರಾನಬಾನು, ನಗರಸಭೆ ಸದಸ್ಯರುಗಳಾದ ಈ.ಮಂಜುನಾಥ್, ಎ.ಮಂಜುನಾಥ್, ಪ್ರೇಮ್‍ಕುಮಾರ್, ಶಿವುಯಾದವ್, ರವಿಚಂದ್ರನಾಯ್ಕ, ಪುರುಷೋತ್ತಮ್, ನಟರಾಜ್, ದಾದಾಪೀರ್, ಅಬ್ಬಾಸ್, ನಾರಾಯಣಚಾರ್, ರಾಜೇಶ್ವರಿ, ಮಂಜುಳ, ಸೈದಾ ಫಿರ್ದೂಸ್, ಲಕ್ಷ್ಮೀದೇವಿ, ಪುಷ್ಪಲತಾ, ಜಯರಾಜ್, ಚಿರಂಜೀವಿ, ತಾ.ಪಂ.ಅಧ್ಯಕ್ಷ ಚಂದ್ರಪ್ಪ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಕಲಾ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಂಕರಮೂರ್ತಿ, ಪ್ರಶಾಂತ್‍ಬಾಬು, ಡಿವೈಎಸ್‍ಪಿ ವೆಂಕಟಪ್ಪನಾಯಕ, ಸಿಪಿಐ ಗುರುರಾಜ್, ಪಿ.ಎಸ್.ಐ. ಶಿವಕುಮಾರ್, ಲಿಂಗರಾಜು, ಸಾಮಾಜ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ, ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ನಗರದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      ಆರಂಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಸಿ.ವಿ.ನಟರಾಜ್, ಎಲ್ಲರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕರಾದ ಶಿವಶಂಕರ್‍ಮಠದ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲಾ ಮಕ್ಕಳಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶಭಕ್ತಿ ಗೀತೆಗಳ ಸಾಂಸ್ಕøತಿಕ ನೃತ್ಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link