ಹಾಸನ : ಸಾಲ ಹಿಂದಿರುಗಿಸದ ಗೆಳೆಯನ ಕೊಲೆ ; ಐವರ ಬಂಧನ!!

ಹಾಸನ :

      ಸಾಲದ ಹಣ ಮರು ಪಾವತಿಸದ್ದಕ್ಕೆ ಆಕ್ರೋಶಗೊಂಡು ಗೆಳೆಯನನ್ನೇ ಅಟ್ಟಾಡಿಸಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಐವರು ಆರೋಪಿಗಳನ್ನು ಹಾಸನ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಫೈನಾನ್ಸ್‌ನಲ್ಲಿ ಕಲೆಕ್ಷನ್‌ ಕೆಲಸ ಮಾಡುತ್ತಿದ್ದ ರಂಗೋಲಿಹಳ್ಳ ನಿವಾಸಿ ಭವಿತ್ (19), ಶಾಂತಿನಗರದ ತರಕಾರಿ ವ್ಯಾಪಾರಿ ತೇಜಸ್ (19), ಜಯನಗರ ನಿವಾಸಿ ಎಪಿಎಂಸಿ ತರಕಾರಿ ವ್ಯಾಪಾರಿ ಪುನೀತ್ (21), ಚನ್ನಪಟ್ಟಣ ಹೌಸಿಂಗ್ ಬೋರ್ಡ್‍ನ ನವೀನ್‍ಕುಮಾರ್ (21) ಹಾಗೂ ಶಾಂತಿನಗರದ ವಿವೇಕ್ (24) ಬಂಧಿತರು.

     ಆರೋಪಿಗಳೆಲ್ಲರೂ ಕೊಲೆಯಾದವನ ಸ್ನೇಹಿತರಾಗಿದ್ದರು. ಹತ್ಯೆಯಾದ ರಘು ತೇಜಸ್ ಎಂಬಾತನಿಂದ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಸಾಲದ ಹಣ ಹಿಂದಿರುಗಿಸಲು ರಘು ನಿರಾಕರಿಸಿದ್ದ. ಈ ವಿಚಾರವಾಗಿ ರಘು, ತೇಜಸ್ ಇತರರ ನಡುವೆ ಜಗಳ ನಡೆದಿತ್ತು. ಇದರಿಂದ ಕೋಪಿತರಾದ ತೇಜಸ್ ಮತ್ತು ಆತನ ನಾಲ್ವರು ಸಹಚರರು ಸೇರಿ ರಘುನನ್ನು ಮುಗಿಸಲು ಸ್ಕೆಚ್ ಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. 

     ಈ ವೇಳೆ ಕೊಲೆಗಡುಕರಿಂದ ತಪ್ಪಿಸಿಕೊಳ್ಳಲು ರಘು ಟೀ ಅಂಗಡಿಗೆ ನುಗ್ಗಿದ್ದ. ಆರೋಪಿಗಳು ಟೀ ಅಂಗಡಿಗೆ ನುಗ್ಗಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದರು. ಇದೀಗ ಗೆಳೆಯನನ್ನು ಕೊಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap