ಮೀಸಲಾತಿಗೆ ಮತ್ತೆ ಅಪಾಯ ಎದುರಾಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ
ಬೆಂಗಳೂರು : ಇಡೀ ದೇಶದಲ್ಲಿ ಕಾಂಗ್ರೆಸ್ ಇಂದು ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದೆ. ಆ.20ರಂದು ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜನ್ಮದಿನ. ಈ ಇಬ್ಬರು ನಾಯಕರು ಜನ್ಮದಿನ ಒಂದೇ ದಿನ ಆಗಿದ್ದು, ಒಟ್ಟಿಗೆ ಜನ್ಮದಿನ ಆಚರಿಸುತ್ತಿದ್ದೇವೆ. ಆ ಮೂಲಕ ಅವರ ಸ್ಮರಣೆ ಮಾಡುತ್ತಿದ್ದೇವೆ. ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಹಾಗೂ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು,
ರಾಜೀವ್ ಗಾಂಧಿ ಅವರು ಚಿಕ್ಕ ವಯಸ್ಸಿನಲ್ಲಿ ಈ ಬೃಹತ್ ರಾಷ್ಟ್ರದ ಪ್ರಧಾನಿ ಆದರು. ಅವರು ಪ್ರಧಾನಿಯಾಗಿ ಈ ದೇಶವನ್ನು 21ನೇ ಶತಮಾನಕ್ಕೆ ವಿಜ್ಞಾನ, ತಂತ್ರಜ್ಞಾನ, ಸಂಪರ್ಕ ಕ್ಷೇತ್ರಗಳಲ್ಲಿ ಜಗತ್ತಿನ ಇತರೆ ರಾಷ್ಟ್ರಗಳ ಮಟ್ಟಕ್ಕೆ ನಿಲ್ಲಲು ತೀರ್ಮಾನಿಸಿ ಇವುಗಳ ಬೆಳವಣಿಗೆಗೆ ಕ್ರಾಂತಿ ಮಾಡಿದರು. ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಅವರಿಗೆ ಯುವಕರಲ್ಲಿ ಅಪಾರವಾದ ಭರವಸೆ ಇತ್ತು. ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ದರು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ ಎಂದು. ಇತಿಹಾಸ ತಿಳಿದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿಯವರು ಇತಿಹಾಸ ತಿರುಚಲು ಹೊರಟಿದ್ದಾರೆ.
ಕುವೆಂಪು, ಅಂಬೇಡ್ಕರ್, ಕನಕದಾಸರು, ಭಗತ್ ಸಿಂಗ್, ನಾರಾಯಣ ಗುರು ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳ ಚರಿತ್ರೆ ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಮ್ಮ ಯುವಕರು ಚರಿತ್ರೆ ತಿಳಿದುಕೊಳ್ಳಬೇಕಾದದ್ದು ಅವಶ್ಯಕ, ಆಗ ಮಾತ್ರ ನೀವು ಭವಿಷ್ಯದಲ್ಲಿ ಸರಿಯಾದ ತೀರ್ಮಾನ ಮಾಡಲು ಸಾಧ್ಯ. ಪಟ್ಟಭದ್ರಶಕ್ತಿಗಳು ಯುವಕರನ್ನು ಜಾತಿ, ಧರ್ಮದ ಹೆಸರಲ್ಲಿ ದಾರಿ ತಪ್ಪಿಸಿ ನೀಚಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಮ್ಮ ವಿದ್ಯಾರ್ಥಿಗಳು ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು. ಆ ಮೂಲಕ ಭವಿಷ್ಯ ರೂಪಿಸಿ, ದೇಶಕ್ಕೆ ಭವಿಷ್ಯ ನೀಡಬೇಕು. ಅದಕ್ಕಾಗಿ ರಾಜೀವ್ ಗಾಂಧಿ ಅವರು ಯುವಕರಿಗೆ ಮತದಾನದ ಹಕ್ಕನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿದರು.
ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅವರು ಒಳ್ಳೆಯ ತೀರ್ಮಾನ ಮಾಡಬೇಕು ಎಂದು ಮತದಾನದ ಹಕ್ಕು ನೀಡಿದರು. ಇದನ್ನು ಪ್ರತಿಯೊಬ್ಬ ಯುವಕ ಯುವತಿಯರು ಅರ್ಥ ಮಾಡಿಕೊಳ್ಳಬೇಕು.
ರಾಜೀವ್ ಗಾಂಧಿ ಅವರು ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದರು. ಇದನ್ನು ತರುವ ಮುನ್ನ ಮಹಿಳೆಯರಿಗೆ ಸಂವಿಧಾನ ಬದ್ಧ ರಾಜಕೀಯ ಮೀಸಲಾತಿ ಇರಲಿಲ್ಲ. ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ಇರಲಿಲ್ಲ. ಪ್ರಜಾಪ್ರಭುತ್ವ ಬಲಗೊಳಿಸಬೇಕು, ಜನ ಪಾಲುದಾರರಾಗಬೇಕು ಎಂದು ಈ ತಿದ್ದುಪಡಿ ತಂದರು. ಯಾರಿಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿರಲಿಲ್ಲ, ಅವರು ಕೂಡ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಭಾಗವಹಿಸಲು ತಿದ್ದುಪಡಿ ತಂದರು. ಅದನ್ನು ಜಾರಿ ಕೊಟ್ಟವರು ನರಸಿಂಹರಾವ್ ಅವರು.
ಈ ತಿದ್ದುಪಡಿ ಆಗುವವರೆಗೂ ಹಿಂದುಳಿದವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೀಸಲಾತಿ ಇರಲಿಲ್ಲ. 94-95ನೇ ರಲ್ಲಿ ತಾಲೂಕು ಪಂಚಾಯ್ತಿ, ಪಾಲಿಕೆ, ನಗರ ಸಭೆ ಚುವನಾವಣೆಯಲ್ಲಿ ಮೀಸಲಾತಿ ಸಿಕ್ಕಿತು. 33% ಹಿಂದುಳಿದವರಿಗೆ ಮೀಸಲಾತಿ ಮೊದಲ ಬಾರಿಗೆ ನೀಡಲಾಯಿತು. ಬಿಸಿಎಂಎ ಅವರಿಗೆ 26.4% ಹಾಗೂ ಬಿಸಿಎಂಬಿ ಅವರಿಗೆ 6.6% ಒಟ್ಟು 33% ರಷ್ಟು ಮೀಸಲಾತಿ ನೀಡಿದರು.
ಇದನ್ನು ಜನರಿಗೆ ತಿಳಿಸಬೇಕು. ಬಿಜೆಪಿಯವರಿಗೆ ಹಿಂದುಳಿದವರು, ಮಹಿಳೆಯರಿಗೆ ಮೀಸಲಾತಿ ನೀಡುವ ಇಚ್ಛಾಶಕ್ತಿ ಬದ್ಧತೆ ಇಲ್ಲ. ಈ ಮೀಸಲಾಯಿ ವಿರುದ್ಧ ಬಿಜೆಪಿ ಉಪಾಧ್ಯಕ್ಷರಾಗಿದ್ದ ರಾಮಾಜೋಷಿಸ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಆಗ ಇದ್ದ ಮಹಾ ವೀರರಾದ ಯಡಿಯೂರಪ್ಪ, ಈಶ್ವರಪ್ಪ ಅವರು ಇವರನ್ನು ತಡೆದಿದ್ದರಾ? ಈ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ವಿರೋಧಿಸಿದರು. ಅದೃಷ್ಟವಶಾತ್ ಈ ಅರ್ತಿ ವಜಾಗೊಂಡಿತು. ಹೀಗಾಗಿ ಮೀಸಲಾತಿ ಉಲಿಯಿತು. ಈಗ ಮತ್ತೆ ಅಪಾಯ ಎದುರಾಗಿದೆ.
ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಕೊಟ್ಟ ಮೀಸಲಾತಿಯನ್ನು ಒಡೆದುಹಾಕಿದ್ದಾರೆ. ಈಗ ಸುಪ್ರೀಂ ಕೋಟ್ ಹಿಂದುಳಿದ ಮೀಸಲಾತಿ ನೀಡುವಾಗ ಮೂರು ಪರೀಕ್ಷೆ ಮಾಡಿಲ್ಲ, ನಿಮಗೆ ಹಿಂದುಳಿದವರ ಬಗ್ಗೆ ಅಂಕಿ ಅಂಶ ಇಲ್ಲ ಎಂದರು. ಇದೇ ಕಾರಣಕ್ಕೆ ನಾವು ಜಾತಿ ಗಣತಿ ಮಾಡಿದ್ದೆವು. ಅದನ್ನು ಕುಮಾರಸ್ವಾಮಿ ಹಾಗೂ ಬಿಜೆಪಿ ಒಪ್ಪಲಿಲ್ಲ. ಇದನ್ನು ಕುಮಾರಸ್ವಾಮಿ ಬಿಜೆಪಿ ಹೇಗೆ ವಿರೋಧಿಸಿದೆ ಎಂದು ಜನರಿಗೆ ಹೇಳಬೇಕು. ಅವರು ಮೀಸಲಾತಿಗೆ ಸಾಮಾಜಿಕ ನ್ಯಾಯಕ್ಕೆ ಹೇಗೆ ವಿರುದ್ಧವಿದ್ದಾರೆ ಎಂದು ತಿಳಿಸಬೇಕು. ಮಂಡಲ್ ಕಮಿಷನ್ ವಿರೋಧಿಸಿದ್ದು ಯಾರು? ಇದೇ ಬಿಜೆಪಿಯವರು.
ಇವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ. ಇಂದು ಹಿಂದುಳಿದವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ರಾಜಕೀಯ ಮೀಸಲಾತಿ ಕೊಟ್ಟಿದ್ದು, ಅದು ಮುಂದುವರಿಯಬೇಕು ಎಂಬ ಬದ್ಧತೆ ಇರುವುದು ಕಾಂಗ್ರೆಸ್ ಗೆ ಮಾತ್ರ.
ಸರ್ವಪಕ್ಷ ಸಭೆ ಕರೆದಿದ್ದಾಗ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ನೀಡಿ ಎಂದರೆ ಅವರು ಭಕ್ತವತ್ಸಲ ಸಮಿತಿ ಮಾಡಿದರು. ಅವರು ಸಮೀಕ್ಷೆ ಮಾಡದೇ 2 ತಿಂಗಳಲ್ಲಿ ವರದಿ ಕೊಟ್ಟರು. ಒಂದು ವೇಳೆ ಇದು ಸುಪ್ರೀಂ ಕೋರ್ಟ್ ನಲ್ಲಿ ಮಾನ್ಯತೆ ಪಡೆಯದಿದ್ದರೆ ಹಿಂದುಳಿದವರಿಗೆ ಮೀಸಲಾತಿ ಇರುವುದಿಲ್ಲ. ಇದೆಲ್ಲವನ್ನು ನೀವು ಆಲೋಚಿಸಬೇಕು. ರಾಜೀವ್ ಗಾಂಧಿ ಅವರು ಕೊಟ್ಟ ಈ ಕೊಡುಗೆ ಅಪಾರವಾದುದು.
ನರೇದ್ರ ಮೋದಿ ಅವರು ಮನ್ ಕಿ ಬಾತ್ ಮಾತನಾಡುತ್ತಾರೆ. ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಒತ್ತಡ ಹಾಕಬೇಕು.
ರಾಜೀವ್ ಗಾಂಧಿ ಅವರ ಈ ಕೊಡುಗೆ ಸ್ಮರಿಸುವುದೇ ಅವರಿಗೆ ನಾವು ಸಲ್ಲಿಸುವ ನಮನ.ಯ ದೇವರಾಜ ಅರಸು ಅವರು 1972ರಲ್ಲಿ ಮುಖ್ಯಮಂತ್ರಿಯಾದರು. ಅವರು ಈ ಅವಕಾಶ ಬಳಸಿಕೊಂಡು ಹಿಂದುಳಿದವರಿಗೆ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರು. ಆವನೂರು ಆಯೋಗ ರಚಿಸಿ 1977ರಲ್ಲಿ ಅನುಮತಿ ನೀಡಿದರು. 1951ರಲ್ಲಿ ಮೊದಲನೇ ಸಂವಿಧಾನ ತಿದ್ದುಪಡಿ ಆಗಿದ್ದು, ಹಿಂದುಳಿದ ಜಾತಿಯವರಿಗೆ ಮೀಸಲಾತಿ ನೀಡುವ ಉದ್ದೇಶದಿಂದ. 1959ರವರೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೀಸಲಾತಿ ಇತ್ತು. ರಾಜ್ಯದಲ್ಲಿ ಮೀಸಲಾತಿ ಸಿಕ್ಕಿದ್ದು 1977ರಲ್ಲಿ. ಹಿಂದುಳಿದವರು ಇದೆಲ್ಲವನ್ನು ತಿಳಿದುಕೊಳ್ಳಬೇಕು. 26 ವರ್ಷ ಹಿಂದುಳಿದ ವರ್ಗದವರಿಗೆ ಮೀಸಲಾತಿ ಇರಲಿಲ್ಲ. ಹೀಗಾಗಿ ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತಾರೆ.
ಕೇವಲ ಹಿಂದುಳಿದವರಿಗೆ ಮಾತ್ರವಲ್ಲ, ಉಳುವವನೆ ಭೂಮಿಯ ಒಡೆಯ ಎಂದು ಮಾಡಿದರು. ಆದರೆ ಈಗ ಉಳ್ಳವನೇ ಭೂಮಿಯ ಒಡೆಯ ಎಂದು ಮಾಡಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇದೆಯಾ? ಮಲಹೊರುವ ಪದ್ಧತಿ, ಜೀತ ಪದ್ಧತಿ ತಪ್ಪಿಸಿದ್ದು ಯಾರು? ಇದನ್ನು ಬಿಜೆಪಿಯವರು ಮಾಡಿದ್ದರಾ? ಇದರ ವಿರುದ್ಧ ಇದ್ದವರು ಬಿಜೆಪಿಯವರು. ಬದಲಾವಣೆ ಆಗಬೇಕಾದರೆ, ಸಾಮಾಜಿಕ, ಆರ್ಥಿಕ ಚಲಾವಣೆ ಆಗಬೇಕಾದರೆ, ಸಾಮಾಜಿಕ ಆರ್ಥಿಕ ಪ್ರಭುತ್ವ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಕಾಂಗ್ರೆಸ್ ನವರು, ಇದಕ್ಕೆ ವಿರುದ್ಧ ಇರುವವರು ಬಿಜೆಪಿಯವರು. ಹೀಗಾಗಿ ಬಡವರು, ಹಿಂದುಳಿದವರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇದೆಯಾ?
ಇಂದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಯಾ ಎದುರಾಗಿದೆ. ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ, ಉಳಿಯಲಿಲ್ಲ ಎಂದರೆ ನಾವು ಉಳಿಯುವುದಿಲ್ಲ. ಪ್ರಜಾಪ್ರಭುತ್ವ ಇದ್ದರೆ ಮಾತ್ರ ಕಟ್ಟಕಡೆಯ ವ್ಯಕ್ತಿಗೂ ಹಕ್ಕು ಗೌರವ ಸಿಗುತ್ತದೆ. ಇದಕ್ಕೆ ಬದ್ಧವಾಗಿರುವುದು ಕಾಂಗ್ರೆಸ್, ವಿರೋಧಿಸುವವರು ಬಿಜೆಪಿ.
