ಹಿಂದುಳಿದವರ ವಿದ್ಯಾಭ್ಯಾಸಕ್ಕೆ ನೆರವಿಗೆ ವಿದ್ಯಾ ಪೋಷಕ್

ದಾವಣಗೆರೆ:

  ಆರ್ಥಿಕವಾಗಿ ಹಿಂದುಳಿದವರಿಗೆ ವಿದ್ಯಾಭ್ಯಾಸಕ್ಕೆ ಧನಸಹಾಯ ನೀಡುವ  ಸಂಸ್ಥೆ ಕಳೆದ 17ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ವಿದ್ಯಾ ಪೊಷಕ ಸಂಸ್ಥೆ ಸಿಇಒ ಉಮೇಶ್ ತಿಳಿಸಿದರು.
ಇಲ್ಲಿನ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿದ್ಯಾ ಪೊಷಕರ ಸಂಸ್ಥೆಯಿಂದ ಭಾನುವಾರ ಆಯೋಜಿಸಿದದ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದ 11 ಜಿಲ್ಲೆಗಳಲ್ಲಿ ಈ ಸಂಸ್ಥೆ ಸಕ್ರಿಯವಾಗಿದೆ. ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸಹಾಯ ನೀಡುತ್ತಿದೆ. ಪ್ರಸ್ತುತ ವರ್ಷ 106 ವಿದ್ಯಾರ್ಥಿಗಳಿಗೆ 7.6ಲಕ್ಷ ರೂ. ಧನಸಹಾಯ ನೀಡುತ್ತಿದೆ ಎಂದು ಮಾಹಿತಿ ನೀಡಿದರು.
ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸದಲ್ಲಿ ಹಿಂದುಳಿದು ಪಠ್ಯೇತರ ಚಟುವಟಿಕೆಗಳಾದ ಸಂಗೀತ, ಚಿತ್ರಕಲೆ, ಕ್ರೀಡೆ, ನೃತ್ಯದಲ್ಲಿ ಆಸಕ್ತ ವಿದ್ಯಾರ್ಥಿಗಳಿಗೂ ಧನಸಹಾಯ ನೀಡುವ ಪ್ರಾಯೋಗಿಕ ಕಾರ್ಯಕ್ರಮ ನಡೆದಿತ್ತು. ಅದು ಯಶಸ್ವಿಯಾಗಿದ್ದು ಇತರೆ ಜಿಲ್ಲೆಗೆ ವಿಸ್ತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.

   ಪ್ರತಿಯೊಬ್ಬರಲ್ಲೂ ವಿಶೇಷ ಕೌಶಲಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಹದಿಂದ  ಹಾಗೂ ಧನಸಹಾಯ ನೀಡುತ್ತಿವೆ. ಹಲವು ರಾಜಕಾರಣಿಗಳು ಸಂಸ್ಥೆ ದೇಣಿಗೆ ನೀಡಿದ್ದರೂ, ಸಂಸ್ಥೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ ಎಂದು ತಿಳಿಸಿದರು.
ವಾಣಿಜ್ಯೋದ್ಯಮಿ ಆರ್.ಆರ್. ರಮೇಶಬಾಬು ಮಾತನಾಡಿ, ಸಂಸ್ಥೆಯಿಂದ ಧನಸಹಾಯ ಪಡೆದವರು ಉತ್ತಮ ಸ್ಥಿತಿ ತಲುಪಿದಾಗ ಋಣ ತೀರಿಸುವ ಪ್ರಯತ್ನ ಮಾಡಬೇಕು. ಸಂಸ್ಥೆ ನಿರಂತರವಾಗಿರಲು ಸಹಾಯ ಪಡೆದವರು ಅಗತ್ಯವುಳ್ಳವರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ಚೆಕ್ ವಿತರಿಸಲಾಯಿತು. ವಾಣಿಜ್ಯೋದ್ಯಮಿ ಆರ್.ಎಸ್. ನಾಗರಾಜ್, ವೈದ್ಯ ಡಾ.ಎ.ಎಂ. ಶಿವಕುಮಾರ್ ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link