ವಿಧಾನಸಭೆಯಲ್ಲಿ ಹೈಡ್ರಾಮಾ :10 ಬಿಜೆಪಿ ಸದಸ್ಯರ ಅಮಾನತ್ತು

ಬೆಂಗಳೂರು:

     ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

     ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯ ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಮಾಡಿದ್ದಾರೆ.
 
     ಈ 10 ಸದಸ್ಯರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.ಕಲಾಪದ ವೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಸಂಬಂಧ ಸ್ಪೀಕರ್ ಯುಟಿ ಖಾದರ್ ಅವರಿ​ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದಾರೆ.
 
     ಇದೀಗ ಈ ದೂರಿನ ಅಧಾರದ ಮೇಲೆ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿ, ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ರಮ ಕೈಗೊಂಡಿರುವ ಸ್ಪೀಕರ್ ಯುಟಿ ಖಾದರ್ ಅವರು ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap