ಬೆಂಗಳೂರು
ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಹೇಳಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಸಾಫ್ಟ್ವೇರ್ ಇಂಜಿನಿಯರ್ಗೆ 11 ಕೋಟಿ ರೂ. ವಂಚನೆ ಮಾಡಿದ್ದಾರೆ. ವಿಜಯ್ ಕುಮಾರ್ ವಂಚನೆ ಒಳಗಾದ ಸಾಫ್ಟ್ವೇರ್ ಇಂಜಿನಿಯರ್.
ವಿಜಯ್ ಕುಮಾರ್ ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಸೈಬರ್ ವಂಚಕರು ಟೆಕ್ಕಿ ವಿನಯ್ ಕುಮಾರ್ ಅವರಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ. ಬಳಿಕ ಹಂತ ಹಂತವಾಗಿ ಒಂದು ತಿಂಗಳ ಕಾಲ ವಿನಯ್ ಕುಮಾರ್ ಅವರಿಂದ 11 ಕೋಟಿ 83 ಕೋಟಿ ರೂ. ಅನ್ನು ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.
ಸೈಬರ್ ವಂಚಕರು ಮೊದಲಿಗೆ ಮುಂಬೈನ ಕ್ರೈಮ್ ಬ್ರ್ಯಾಂಚ್ ಎಂದು ಹೇಳಿಕೊಂಡಿದ್ದಾರೆ. ನಂತರ ಇಡಿ, ಐಟಿ ಅಧಿಕಾರಿಗಳು ಎಂದು ಹೇಳಿಕೊಂಡು ವಂಚನೆ ಎಸಗಿದ್ದಾರೆ. ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆಯಾಗಿದೆ. ಪೊಲೀಸ್, ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮುಂತಾದ ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಜನರಿಗೆ ಕರೆ ಮಾಡಿ, ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಹೆದರಿಸಿ, ಬೆದರಿಸಿ, ನಂತರ ಹಣಕ್ಕೆ ಬೇಡಿಕೆ ಇಡುತ್ತಾರೆ. ಆನ್ಲೈನ್ ಬ್ಯಾಂಕಿಂಗ್ ಸೇರಿದಂತೆ ಹಲವು ಮಾರ್ಗಗಳ ಮುಖಾಂತರ ಅವರಿಂದ ಹಣ ಸುಲಿಗೆ ಮಾಡುತ್ತಾರೆ. ವಂಚಕರು ಸಂತ್ರಸ್ತರಿಂದ ಲಕ್ಷ, ಕೋಟಿಗಳ ಲೆಕ್ಕದಲ್ಲಿ ಹಣ ಸುಲಿಗೆ ಮಾಡುತ್ತಾರೆ.
