11 ಐಎಎಸ್ ಅಧಿಕಾರಿಗಳ ಎತ್ತಂಗಡಿ!!

ಬೆಂಗಳೂರು:

     ದೋಸ್ತಿ ಸರಕಾರದಿಂದ ಮತ್ತೊಂದು ಅಡಳಿತದಲ್ಲಿ ಸರ್ಜರಿಯಾಗಿದ್ದು, ಒಟ್ಟು 11 ಮಂದಿ ಐಎಎಸ್ ಅಧಿಕಾರಿಗಳು ಎತ್ತಂಗಡಿ ಮಾಡಿ ವಿವಿಧ ಕಡೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

      ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ.ಶಾಲಿನಿ ರಜನೀಶ್, ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್.ಆರ್.ಉಮಾಶಂಕರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನರಾಜ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿದ್ದ ಗಂಗಾರಾಮ್ ಬಡೇರಿಯಾ ಅವರನ್ನು ಇಲಾಖೆ ಸೇವೆಯಿಂದ ಬಿಡುಗಡೆ ಮಾಡಿ, ಆ ಸ್ಥಾನಕ್ಕೆ ಕೆಪಿಟಿಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ್‍ನಾಯಕ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್, ಬಿಬಿಎಂಪಿಯ ಹೆಚ್ಚುವರಿ ಆಯುಕ್ತರಾಗಿದ್ದ ಬಿ.ರಣದೀಪ್ , ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ ವಸಂತಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಪ್ರಮುಖ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದ್ದು, ಹೊಸಬರನ್ನು ನೇಮಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap