ಚಾಮುಂಡೇಶ್ವರಿ : KSRTC ಬಸ್‌ ನಲ್ಲಿ 11 ಲಕ್ಷ ನಗದು ವಶ

ಮೈಸೂರು

         ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ರಮ್ಮನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿ ಸುಮಾರು 11 ಲಕ್ಷ ನಗದು ವಶಕ್ಕೆ ಪಡೆಯಲಾಗಿದ್ದು, ಲಕ್ಷಾಂತರ ರೂಪಾಯಿಯ ಹಿಂದಿನ ಮೂಲದ ಬಗ್ಗೆ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದೆ ಹಣವನ್ನು ಸಾಗಿಸುತ್ತಿದ್ದ ವೇಳೆ ತಪಾಸಣೆ ಮಾಡಿರುವ ಚೆಕ್‌ಪೋಸ್ಟ್‌ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆ ವಶಕ್ಕೆ ಹಸ್ತಾಂತರಿಸಿದ್ದಾರೆ.

     ಈವರೆಗೂ ಜಿಲ್ಲೆಯಲ್ಲಿ ಅಧಿಕಾರಿಗಳು ಸುಮಾರು 31,56,300 ಲಕ್ಷ ರೂಪಾಯಿಯನ್ನು ವಶಕ್ಕೆ ಪಡೆದಿದಿದ್ದಾರೆ. ಈ ಪೈಕಿ 11,79,500 ಲಕ್ಷ ರೂ. ರಮ್ಮನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿದೆ. ಅಲ್ಲದೇ, 26,320 ರೂ. ಮೌಲ್ಯದ 40 ಕುಕ್ಕರ್, 20 ತವಾ ಮತ್ತು 41,583 ರೂ. ಮೌಲ್ಯದ 70.69 ಲೀ. ಮದ್ಯ ಹಾಗೂ 25 ಸಾವಿರ ರೂ. ಮೌಲ್ಯದ 1 ಕೆಜಿ ಗಾಂಜಾ ವಶಕ್ಕೆ ಪಡೆದಿದಿದ್ದಾರೆ.

     ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸಲಾಗುತ್ತಿದ್ದ ಕೋಟಿ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾಡಳಿತದ ತಪಾಸಣಾ ಅಧಿಕಾರಿಗಳು ಪೊಲೀಸರು ಮತ್ತು ಅರೆಸೇನಾ ಪಡೆಯು ನಗರ ಸೇರಿದಂತೆ ಜಿಲ್ಲೆಯ 51 ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ಕಟ್ಟುನಿಟ್ಟಿನ ತಪಾಸಣೆ ನಡೆಸಿದ್ದಾರೆ. ಈವರೆಗೆ 1,06,38,060 ರೂ. ಮೌಲ್ಯದ 33,744.66 ಲೀ. ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಪೊಲೀಸರು 1,06,26,821 ರೂ.ಮೌಲ್ಯದ 33,742.05 ಲೀ. ಮತ್ತು ಪೊಲೀಸರು 1,017 ರೂ.ಮೌಲ್ಯದ 2.61 ಲೀ. ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap