ಟೀಂ ಇಂಡಿಯಾ ವಿಜಯೋತ್ಸವ : 11 ಮಂದಿ ಆಸ್ಪತ್ರೆಗೆ ದಾಖಲು

ಮುಂಬೈ:

   ದಕ್ಷಿಣ ಮುಂಬೈನಲ್ಲಿ ನಡೆದ ಟಿ-20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು. ಈ ವೇಳೆ ಕನಿಷ್ಠ 11 ಜನರಿಗೆ ಸಣ್ಣಪುಟ್ಟ ಗಾಯಗಳು ಅಥವಾ ತಲೆತಿರುಗುವಿಕೆಯಿಂದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

    ವಿಪರೀತ ಜನಸಂದಣಿಯಿಂದಾಗಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಮತ್ತು ಕೆಲವರು ಉಸಿರಾಟದ ತೊಂದರೆಯಿಂದ ಬಳಲಿದವರನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಜೆಜೆ ಗ್ರೂಪ್ ಆಫ್ ಹಾಸ್ಪಿಟಲ್ಸ್ ಡೀನ್ ತಿಳಿಸಿದ್ದಾರೆ.

   ಒಬ್ಬ ಅಭಿಮಾನಿಯನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಬಳಿಯ ಸರ್ಕಾರಿ ಸೇಂಟ್ ಜಾರ್ಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಾಥಮಿಕ ಚಿಕಿತ್ಸೆಯ ನಂತರ ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯನ್ನು ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

   ಗುರುವಾರ ಸಂಜೆ ಟೀಂ ಇಂಡಿಯಾದ ವಿಜಯೋತ್ಸವ ಮೆರವಣಿಗೆಯನ್ನು ವೀಕ್ಷಿಸಲು ಲಕ್ಷಾಂತರ ಅಭಿಮಾನಿಗಳು ಮರೀನ್ ಡ್ರೈವ್‌ಗೆ ಆಗಮಿಸಿದ್ದರು.ಪೊಲೀಸರು ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿದ್ದರಿಂದ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಿಲ್ಲ.

Recent Articles

spot_img

Related Stories

Share via
Copy link
Powered by Social Snap