ಬೆಂಗಳೂರು:
‘ದೋಷಪೂರಿತ’ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ಸಿಸ್ಟಂ (112) ರಾಷ್ಟ್ರೀಯ ತುರ್ತು ಸಹಾಯವಾಣಿ ಸಂಖ್ಯೆ ಸಂಪರ್ಕಿಸಲು ವಿಳಂಬವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.
ನಗರದ ನಾಗದೇವನಹಳ್ಳಿ ನಿವಾಸಿಯಾಗಿರುವ ಅರುಣ್ ಕುಮಾರ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
IPL 2022: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ ಆರ್ಸಿಬಿ
ಸಂಕಷ್ಟದಲ್ಲಿರುವ ವ್ಯಕ್ತಿ 112 ತುರ್ತು ಸಹಾಯವಾಣಿ ಸಂಪರ್ಕಿಸಲು ಕಷ್ಟಕರವಾಗುತ್ತಿದೆ ಎಂದು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದಾರೆ. ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್ಆರ್ ಕೃಷ್ಣ ಕುಮಾರ್ ಅವರ ವಿಭಾಗೀಯ ಪೀಠವು ಈ ಕುರಿತು ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ್ದು, ವಿಚಾರಣೆಯನ್ನು ಏಪ್ರಿಲ್ 11, 2022 ಕ್ಕೆ ಮುಂದೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
