ಉತ್ತರಕಾಶಿಯಲ್ಲಿ 144 ಸೆಕ್ಷನ್‌ ಜಾರಿ….!

ಉತ್ತರಕಾಶಿ

     ಕಳೆದ ತಿಂಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಆರೋಪದ ಮೇಲೆ ಕೋಮು ಗಲಭೆಗಳಿಗೆ ಸಾಕ್ಷಿಯಾದ ಪುರೋಲಾದಲ್ಲಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿಗೊಳಿಸಿದೆ. ಪುರೋಲಾದಲ್ಲಿ ಮಹಾ ಪಂಚಾಯಿತಿ ನಡೆಸಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಜಿಲ್ಲೆಯ ಗಿರಿಧಾಮವಾಗಿರುವ ಪುರೋಲಾದಲ್ಲಿ ಸೆಕ್ಷನ್ 144 ಸಿಆರ್‌ಪಿಸಿ ವಿಧಿಸಲಾಗಿದೆ ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರೋಹಿಲ್ಲಾ ತಿಳಿಸಿದ್ದಾರೆ.

    ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಯ ಸೆಕ್ಷನ್ 144 ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆಯನ್ನು ನಿಷೇಧಿಸುವ ಆದೇಶವನ್ನು ಹೊರಡಿಸಲು ಅಧಿಕಾರಿಗಳಿಗೆ ಅಧಿಕಾರ ನೀಡುತ್ತದೆ. 

    “ಜಿಲ್ಲಾ ಪೊಲೀಸರು ಮತ್ತು ಆಡಳಿತವು ಸಂಪೂರ್ಣ ಸಿದ್ಧವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಾನೂನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ. 

     ಫೋಟೋ ಲೀಕ್ ಮಾಡಿದ ಜಮೀರ್ ಅಹ್ಮದ್ ಗೆ ಸುರ್ಜೇವಾಲಾ ಫುಲ್ ಕ್ಲಾಸ್ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಳೆದ ವಾರ ಸಚಿವಾಲಯದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಮುಂಬರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಡಿಜಿಪಿ ಅಶೋಕ್ ಕುಮಾರ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ವಿ ಮುರುಗೇಶನ್ ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ಉತ್ತರಕಾಶಿ ಪಟ್ಟಣದಲ್ಲಿ ಕಳೆದ ತಿಂಗಳು ಅಲ್ಪಸಂಖ್ಯಾತ ಸಮುದಾಯದ ಒಬ್ಬ ಸೇರಿದಂತೆ ಇಬ್ಬರು ಯುವಕರು 14 ವರ್ಷದ ಬಾಲಕಿಯನ್ನು ಅಪಹತಿಸಲು ಯತ್ನಿಸಿದ್ದಾರೆ ಎಂಬ ವಿಷಯವಾಗಿ ಕೋಮು ಗಲಭೆಗಳು ಉಂಟಾಗಿದ್ದವು. ಇದೆ ಕಾರಣಕ್ಕೆ ಇಬ್ಬರನ್ನೂ ಬಂಧಿಸಲಾಯಿತು. ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುರುಗೇಶನ್ ಹೇಳಿದ್ದಾರೆ.

    “ಇತ್ತೀಚೆಗೆ ಉತ್ತರಕಾಶಿ, ವಿಕಾಸ್ ನಗರ ಮತ್ತು ಇತರ ಪ್ರದೇಶಗಳಲ್ಲಿ ಓಡಿಹೋದ ಘಟನೆಗಳು ನಡೆದಿವೆ, ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಶಾಂತಿ ಸ್ಥಾಪನೆಗೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯಾರೇ ಕಾನೂನು ಉಲ್ಲಂಘಿಸಿದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

    ಈ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ. ಇನ್ನು, ರಾಜ್ಯಾದ್ಯಂತ ಹೆಚ್ಚುತ್ತಿರುವ “ಲವ್ ಜಿಹಾದ್” ಘಟನೆಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಗಂಗೋತ್ರಿಯಲ್ಲಿ ಅಂಗಡಿಗಳನ್ನು ಮುಚ್ಚಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಸ್ಥಳೀಯ ವ್ಯಾಪಾರಿಗಳು ರಸ್ತೆ ಬದಿಯ ಸಣ್ಣ ವ್ಯಾಪಾರಗಳಲ್ಲಿ ತೊಡಗಿರುವ ಹೊರಗಿನಿಂದ ಬಂದವರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದು ಚಾರ್ ಧಾಮ್ ಯಾತ್ರಾ ಪಟ್ಟಣಗಳಲ್ಲಿ ಒಂದಾದ ಗಂಗೋತ್ರಿಯ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap