ಅತಿವೇಗದ ಕಾರು ಚಾಲನೆ : 2 ಸಾವು ….!

ಮಂಗಳೂರು:

   ಜೂನ್ 17ರ ಮಧ್ಯರಾತ್ರಿ ನಗರದ  ಹೊರವಲಯದ ಜಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ್ದ ಕಾರು ಅಪಘಾತದಲ್ಲಿ  ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಯುವಕರು  ಸಾವಿಗೀಡಾಗಿದ್ದಾರೆ. ಎನ್ಎಸ್​ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟವರು. ರಾತ್ರಿ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಮದ್ಯಪಾನ ಮಾಡಿ ಅತಿವೇಗವಾಗಿ ಕಾರು ಚಾಲನೆ ಮಾಡಿರುವುದೇ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಅತಿಯಾದ ವೇಗ, ಡ್ರಿಂಕ್​ & ಡ್ರೈವ್  ಅಡಿ ಪ್ರಕರಣ ದಾಖಲಾಗಿದೆ.

    ಮಧ್ಯರಾತ್ರಿವರೆಗೂ ಪಾರ್ಟಿ ಮಾಡಿದ್ದ ಐವರು ಯುವಕರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿನ ಕಡೆಗೆ ಹೊರಟಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿಲೋಮೀಟರ್ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಐವರು ಯುವಕರ ಪೈಕಿ ಓಂಶ್ರೀ ಪೂಜಾರಿ ಹಾಗೂ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟಿದ್ದು, ವಂಶಿ ಮತ್ತು ಆಶಿಕ್​ಗೆ ಗಂಭೀರ ಗಾಯಗಳಾಗಿವೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಟಲಿ ಮೂಲದ ಇನ್ನೊಬ್ಬ ಗೆಳೆಯ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅತೀ ವೇಗಕ್ಕೆ ಫೋಕ್ಸ್ ವೇಗನ್ ಕಾರು ಅಪ್ಪಚ್ಚಿಯಾಗಿದೆ.

Recent Articles

spot_img

Related Stories

Share via
Copy link