ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರದಲ್ಲಿ ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತೆರಳುತ್ತಿತ್ತು. ಕೆಎಸ್ಆರ್ಟಿಸಿ ಬಸ್ಸು ಕಡೂರಿನಿಂದ ಹೂವಿನಹಡಗಲಿಗೆ ತೆರಳುತ್ತಿತ್ತು. ಮೃತಪಟ್ಟ ಇಬ್ಬರೂ ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕ್ಲೀನರ್ ಎಂದು ತಿಳಿದುಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.