ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿ

ಬೆಂಗಳೂರು: 

   ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1287ಕ್ಕೆ ಏರಿಕೆಯಾಗಿದೆ.ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.Image

   ರಾಜ್ಯದಲ್ಲಿ ಇಂದು ಒಟ್ಟು 571 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 67 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 459 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 453 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

Recent Articles

spot_img

Related Stories

Share via
Copy link