2500 ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಸನ್ಮಾನ

ತುಮಕೂರು:

            ಇಡೀ ರಾಜ್ಯದಲ್ಲಿ 2500 ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಿದ ಇತಿಹಾಸವಿಲ್ಲ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ 2500ಕ್ಕೂ ಅಧಿಕಶಿಕ್ಷಕರನ್ನು ಶಾಸಕ ಡಿ.ಸಿ.ಗೌರಿಶಂಕರ್‍ರವರು ಸನ್ಮಾನಿಸಿ ಗುರು ಭಕ್ತಿ ಮೆರೆದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅನುದಾನಿತ ಶಾಲೆಗಳು, ಹಾಗೂ ನಿವೃತ್ತಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಿದ್ದು ಗಮನ ಸೆಳೆಯಿತು ಇಂತಹಕಾರ್ಯಕ್ರಮ ನಡೆದಿರುವುದುರಾಜ್ಯದಲ್ಲೇ ಪ್ರಥಮಎನ್ನಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಷ್ಟೂ ಜನಶಿಕ್ಷಕರಿಗೆ ಶಾಲು, ಹಾರ ಹಾಗೂ ನೆನಪಿನ ಕಾಣಿಕೆ ನೀಡಿ ಶಾಸಕ ಡಿ.ಸಿ.ಗೌರಿಶಂಕರ್‍ಸನ್ಮಾನಿಸಿದ್ದಾರೆ.ಮನೆ ಮನೆ ಕುಮಾರಣ್ಣ ಕಾರ್ಯಕ್ರಮ ಯಶಸ್ವಿಯಾಗಿ ಪೂರೈಸಿ ಮನೆ ಮಾತಾಗಿದ್ದ ಶಾಸಕ ಡಿ.ಸಿ.ಗೌರಿಶಂಕರ್ ಇದೀಗ ಒಂದೇ ವೇದಿಕೆಯಲ್ಲಿಶಿಕ್ಷಕರನ್ನುಸನ್ಮಾನಿಸಿಗಮನ ಸೆಳೆದಿದ್ದಾರೆ.
            ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ತುಮಕೂರು  ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಖಾಸಗೀ ಶಾಲೆಗಳೀಗೆ ಸೆಡ್ಡು ಹೊಡೆಯುವಂತೆ ಸರ್ಕಾರಿ ಶಾಲೆ ಅಭಿವೃದ್ಧಿ ಪಡಿಸಲಾಗುವುದುಇದಕ್ಕಾಗಿ 113 ಕೋಟಿ ರೂಗಳ ಅನುದಾನಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಮಂತ್ರಿಗಳಿಗೆ ಪ್ರಸ್ಥಾವನೆ ಸಲ್ಲಿಸಲಾಗಿದೆ. ಹಂತ ಹಂತವಾಗಿಅನುದಾನ ಬಿಡುಗಡೆಗೊಳೀಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿರುವುದಾಗಿ ತಿಳಿಸಿದರು.ನಂತರ ಮಾತನಾಡಿದ ಶಾಸಕರುಗುರುವಿನ ಗುಲಾಮನಾಗದಒರತುದೊರೆಯದಣ್ಣ ಮುಕುತಿ ಎಂಬ ನಾಲ್ನುಡಿಯಂತೆ ಪ್ರತಿ ವ್ಯಕ್ತಿಯುತಂದೆತಾಯಿ ಹಾಗೂ ಗುರುವಿನ ಮಾರ್ಗದರ್ಶನದಲ್ಲಿ ಮುನ್ನೆಡೆದಾಗ ಮಾತ್ರಯಶಸ್ಸುದೊರಕುತ್ತದೆಎಂದರು.
              ಶಿಕ್ಷಕರಿಗೆ ಸಮಾಜದಲ್ಲಿ ಪೂಜ್ಯನೀಯ ಸ್ಥಾನವಿದೆ ಸದೃಡ ಭಾರತವನ್ನು ನಿರ್ಮಾಣ ಮಾಡುವ ವಿದ್ಯಾರ್ಥಿಗಳ ಭವಿಷ್ಯರೂಪಿಸುವ ಮಹತ್ತರಜವಾಬ್ದಾರಿ ಶಿಕ್ಷಕರ ಮೇಲಿದ್ದುತಮ್ಮ ಪಾಲಿನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಸದೃಡ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

Recent Articles

spot_img

Related Stories

Share via
Copy link