ಕನೌಜ್:
ವೇಗವಾಗಿ ಬರುತ್ತಿದ್ದ ಬಸ್ – ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕನೌಜ್ನ ಜಲಾಲ್ಪುರ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಕಾನ್ಪುರದ ಅಜಿತ್ ಕುಮಾರ್ (30), ಶಕುಂತಲಾ (35) ಮತ್ತು 7 ವರ್ಷದ ಬಾಲಕ ಆಯುಷ್ ಎಂದು ಗುರುತಿಸಲಾಗಿದೆ.
ಜಲಾಲ್ಪುರ ಗ್ರಾಮದ ಬಳಿಯ ಜಿಟಿ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಅಸುನೀಗಿದ್ದಾರೆ.
ಇನ್ನು ಬಸ್ನಲ್ಲಿದ್ದ ಹದಿನೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವ್ಯಾನ್ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ