ಯಶ್‌ ಹುಟ್ಟುಹಬ್ಬ: ವಿದ್ಯುತ್‌ ಹರಿದು ಮೂವರು ಅಭಿಮಾನಿಗಳ ಸಾವು

ಗದಗ:

       ರಾಕಿಂಗ್ ಸ್ಟಾರ್ ಯಶ್  ಹುಟ್ಟುಹಬ್ಬದ ಅಂಗವಾಗಿ ತಡವಾಗಿ ಕಟೌಟ್  ಕಟ್ಟಲು ಹೋಗಿದ್ದ ಮೂವರು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

      ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.  ಹನುಮಂತ ಹರಿಜನ್ , ಮುರಳಿ ನಡವಿನಮನಿ  ಮತ್ತು ನವೀನ್ ಗಾಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಹುಟ್ಟುಹಬ್ಬ ಆಚರಿಸಲು ಇವರೆಲ್ಲರೂ ಯೋಜಿಸಿದ್ದರು ಎನ್ನಲಾಗಿದೆ.

      ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap