ನಟಿಯ ದೂರಿನ ಅನ್ವಯ ಮೂವರು ಐಪಿಎಸ್‌ ಅಧಿಕಾರಿಗಳ ಅಮಾನತು….!

ಬೆಂಗಳೂರು : 

   ಚಿತ್ರರಂಗದಲ್ಲಿ ಒಬ್ಬರಾದ ಬಳಿಕ ಒಬ್ಬರು ಲೈಂಗಿಕ ಕಿರಕುಳ, ದೌರ್ಜನ್ಯದ ಆರೋಪ ಮಾಡುತ್ತಿದ್ದಾರೆ. ನಿರ್ಮಾಪಕರು, ನಟರ ವಿರುದ್ಧ ಹಲವು ನಟಿಯರ ವಿರುದ್ಧ ಈ ರೀತಿಯ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈಗ ಮುಂಬೈ ಮೂಲದ ಕಾದಂಬರಿ ಜೆತ್ವಾನಿ ಅವರು ಆಂಧ್ರ ಪ್ರದೇಶದ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಈ ಸಂಬಂಧ ಆ ಮೂವರನ್ನು ಅಮಾನತು ಮಾಡಲಾಗಿದೆ.

   ಕಾದಂಬರಿ ಅವರು ಕನ್ನಡದಲ್ಲಿ ‘ಊಜಾ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನಲ್ಲಿ ‘ಆಟ’, ಮಲಯಾಳಂನಲ್ಲಿ ‘ಐ ಲವ್​ ಯೂ’ ಹೆಸರಿನ ಸಿನಿಮಾ ಮಾಡಿದ್ದಾರೆ. ಇದರ ಜೊತೆಗೆ ತೆಲುಗು ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಅವರು ಈಗ ಮುಂದೆ ಬಂದು ಈ ಬಗ್ಗೆ ಮಾತನಾಡಿದ್ದಾರೆ. ಅವರನ್ನು ಕಾನೂನು ಬಾಹೀರವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

   ಅಮಾನತುಗೊಂಡ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅಪರಾಧವನ್ನು ದಾಖಲಿಸುವ ಮೊದಲೇ ನಟಿಯನ್ನು ಬಂಧಿಸಲು ಆದೇಶ ನೀಡಿದ್ದರು. ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸದೆ ಈ ಮೌಖಿಕ ಸೂಚನೆಗಳನ್ನು ಪಾಲಿಸಿದ್ದಕ್ಕಾಗಿ ಮತ್ತೋರ್ವ ಅಧಿಕಾರಿಯೊಬ್ಬರು ಅಮಾನತುಗೊಂಡಿದ್ದಾರೆ. ಮತ್ತೋರ್ವ ಅಧಿಕಾರಿಯಿಂದಲೂ ಅಧಿಕಾರದ ದುರುಪಯೋಗ ಆಗಿರೋದು ಕಂಡು ಬಂದಿದೆ. ಹೀಗಾಗಿ, ಅವರನ್ನು ಅಮಾನತು ಮಾಡಲಾಗಿದೆ.

 
   ಕಾದಂಬರಿ ವಿರುದ್ಧ ನಿರ್ಮಾಪಕ-ರಾಜಕಾರಣಿ ಫೋರ್ಜರಿ ಆರೋಪ ಮಾಡಿದ್ದರು.  ಈ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.  ನಂತರ ಅವರನ್ನು ಬಂಧಿಸಿ ವಿಜಯವಾಡಕ್ಕೆ ತರಲಾಗಿತ್ತು. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಆರೋಪವನ್ನು ಅವರು ಅಲ್ಲಗಳೆದಿದ್ದರು. ‘ಬಾಂದ್ರಾ ಕುರ್ಲಾ ಪೊಲೀಸ್ ಠಾಣೆಯಲ್ಲಿ ನಾನು ಫೈಲ್ ಮಾಡಿದ ಕೇಸ್​ಗೆ ವಿರುದ್ಧವಾಗಿ ಅವರು ಈ ರೀತಿ ಕೇಸ್ ಹಾಕಿದ್ದಾರೆ. ಈ ನಿರ್ಮಾಪಕನಿಗೆ ಪೊಲೀಸರು ಬೆಂಬಲವಾಗಿ ನಿಂತಿದ್ದಾರೆ’ ಎಂದು ಕಾದಂಬರಿ ಹೇಳಿದ್ದರು.

Recent Articles

spot_img

Related Stories

Share via
Copy link