ಎಟಿಎಂ ಬಳಕೆದಾರರಿಗೆ ವಂಚನೆ : 3ಜನರ ಬಂಧನ …!

ಬೆಂಗಳೂರು

    ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎಟಿಎಂ ಬಳಕೆದಾರರಿಗೆ ವಂಚನೆ ಮಾಡುತ್ತಿದ್ದ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ, ಎಟಿಎಂ ಬಳಕೆದಾರರನ್ನು ವಂಚಿಸಲು ಬೆಂಗಳೂರಿಗೆ ಬಂದಿದ್ದ ಶಿವಮೊಗ್ಗ ನಿವಾಸಿ “ದಡಿಯಾ ದಿಲೀಪ್” ಎಂದು ಕರೆಯಲ್ಪಡುವ ಸಾಗರ್ ಅಲಿಯಾಸ್ ದಿಲೀಪ್​​ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಪ್ರಸ್ತುತ ನಗರದೊಳಗೆ ಕನಿಷ್ಠ ಮೂರು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದಾನೆ.

   ಬೇಗೂರು ಪೊಲೀಸರು ಎಟಿಎಂ ಕಿಯೋಸ್ಕ್‌ನ ಹೊರಗೆ ಕಾಯುತ್ತಿದ್ದಾಗ ಸಾಗರ್​​ನನ್ನು ಬಂಧಿಸಿದ್ದಾರೆ. ಆತ ತಪ್ಪೊಪ್ಪಿಕೊಂಡಿದ್ದಾನೆ ಮತ್ತು ಆತನ ಬಳಿಯಿಂದ ಸದ್ಯ ಸ್ಥಗತಗೊಂಡಿರುವ 32 ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ್ ಆಗಾಗ ಬೆಂಗಳೂರಿಗೆ ಬರುತ್ತಿದ್ದು, ಒಂದೆರಡು ದಿನ ಇಲ್ಲಿದ್ದು, ವಂಚನೆ ಕೃತ್ಯ ಎಸಗಿದ ಬಳಿಕ ಶಿವಮೊಗ್ಗಕ್ಕೆ ತೆರಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಉಪ್ಪಾರಪೇಟೆ ಹಾಗೂ ಚಂದ್ರಾ ಲೇಔಟ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲೂ ಈತ ಶಾಮೀಲಾಗಿದ್ದಾನೆ.

    ಮತ್ತೊಂದು ಘಟನೆಯಲ್ಲಿ ಸುಬ್ರಹ್ಮಣ್ಯಪುರ ಪೊಲೀಸರು ಎಟಿಎಂ ಬಳಕೆದಾರರನ್ನು ವಂಚಿಸಲು ಇದೇ ವಿಧಾನವನ್ನು ಬಳಸಿಕೊಂಡ ಇಬ್ಬರನ್ನು ಬಂಧಿಸಿದ್ದಾರೆ. ಶಂಕಿತ ಆರೋಪಿಗಳಾದ ವಿವೇಕ್ ಕುಮಾರ್ (28) ಮತ್ತು ಚುನಿಲಾಲ್ ಕುಮಾರ್ (24) ಇಬ್ಬರೂ ಬಿಹಾರ ಮೂಲದವರಾಗಿದ್ದಾರೆ. ಅವರ ಬಳಿಯಿದ್ದ 37 ಎಟಿಎಂ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

Recent Articles

spot_img

Related Stories

Share via
Copy link