ಬಿಜಾಪುರದಲ್ಲಿ ಶಾರಣಾದ 30 ನಕ್ಸಲೀಯರು ….!

ಬಿಜಾಪುರ:

   ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 30 ನಕ್ಸಲೀಯರು ಮಂಗಳವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಅವರಲ್ಲಿ 9 ಮಂದಿಗಳ ತಲೆ ರೂ. 39 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

   ಆರು ಮಂದಿ ಮಹಿಳೆಯರು ಒಳಗೊಂಡ ನಕ್ಸಲೀಯರು, ಪೊಲೀಸ್ ಮತ್ತು ಸಿಆರ್ ಪಿಎಫ್ ನ ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದು, ಆದಿವಾಸಿಗಳ ಮೇಲೆ ಮಾವೋವಾದಿಗಳು ನಡೆಸಿದ ದೌರ್ಜನ್ಯ ಮತ್ತು ಟೊಳ್ಳಾದ ಮಾವೋವಾದಿ ಸಿದ್ಧಾಂತದಿಂದ ನಿರಾಶೆಗೊಂಡಿದ್ದೇವೆ ಎಂದು ಅವರು ಹೇಳಿರುವುದಾಗಿ ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಶರಣಾದ ನಕ್ಸಲೀಯರು ಪೊಲೀಸರ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿದ್ದರು. ಶರಣಾದ 30 ಕಾರ್ಯಕರ್ತರಲ್ಲಿ ಇಬ್ಬರ ತಲೆಗೆ ತಲಾ 8 ಲಕ್ಷ ರೂ..ಮೂವರ ತಲೆಗೆ ತಲಾ 5, ಮತ್ತೆ ಇನ್ನೂ ಮೂವರ ತಲೆಗೆ ತಲಾ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

   ಈ ಒಂಬತ್ತು ಕೇಡರ್‌ಗಳು ಭದ್ರತಾ ಸಿಬ್ಬಂದಿಯ ಮೇಲೆ ಅನೇಕ ದಾಳಿಗಳಲ್ಲಿ ಭಾಗಿಯಾಗಿದ್ದಾರೆ. ಶರಣಾದ ನಕ್ಸಲೀಯರಿಗೆ ತಲಾ 25,000 ರೂಪಾಯಿ ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಪುನರ್ವಸತಿ ಕಲ್ಪಿಸಲಾಗುವುದು, ಜಿಲ್ಲೆಯಲ್ಲಿ ಈ ವರ್ಷ 76 ನಕ್ಸಲೀಯರು ಹಿಂಸಾಚಾರವನ್ನು ತೊರೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap