ಬೆಂಗಳೂರು:
ಮುಖ್ಯಮಂತ್ರಿ ಸೂಚನೆ ಮೇರೆಗೆ ಕೈಬಿಡಲಾದ ಬಸ್ ಪ್ರಯಾಣ ದರ ಏರಿಕೆಯ ಕ್ರಮವನ್ನು, ಈಗ ಮತ್ತೆ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.
ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಇಲ್ಲ..!
ಕೆಲ ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಸರ್ಕಾರಿ ಬಸ್ ಗಳು ನಷ್ಟ ಅನುಭವಿಸುತ್ತಿರುವ ಕಾರಣ ಬಸ್ ದರವನ್ನು ಶೇ.18ರಷ್ಟು ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸೆ.17ರಂದು ದರ ಏರಿಸಿ ಸುತ್ತೋಲೆ ಹೊರಡಿಸಿತ್ತು, ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ದರ ಏರಿಕೆ ತಡೆಹಿಡಿಯಲಾಗಿತ್ತು.
ಇದೀಗ ಮುಖ್ಯಮಂತ್ರಿ ಸೂಚನೆ ಮೇರೆಗೆ ಸಾರಿಗೆ ಇಲಾಖೆಯು ಟಿಕೆಟ್ ದರ ಪ್ರಸ್ತಾವನೆಯನ್ನು ಮರು ಪರಿಶೀಲಿಸಲು ಮುಂದಾಗಿದೆ ಇದರ ಪ್ರಕಾರ ಸಾರಿಗೆ ಪ್ರಯಾಣ ದರ ಶೇ.15-16ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳಿಗೆ ಮಾಸಿಕ 15 ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
