ನವದೆಹಲಿ
ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರದ ಕ್ರಮ ಪ್ರಶ್ನೆ ಮಾಡಿದ್ದ ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಅಕ್ಟೋಬರ್ ಗೆ ಮಂದೂಡಿದೆ.ಅಕ್ಟೋಬರ್ ನಲ್ಲಿ ಐವರ ಸದಸ್ಯರ ಸಂವಿಧಾನ ಪೀಠವು ಈ ವಿಷಯದ ವಿಚಾರಣೆ ನಡೆಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ.370 ನೇ ವಿಧಿಯನ್ನು ರದ್ದುಪಡಿಸಿರುವುದರ ವಿರುದ್ಧ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ನ್ಯಾಯಪೀಠ ಆಲಿಸಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/SupremeCourtofIndia.gif)