ರೇಣುಕಸ್ವಾಮಿ ಪ್ರಕರಣ : 4ನೇ ಆರೋಪಿ ತಾಯಿ ನಿಧನ …!

ಚಿತ್ರದುರ್ಗ: 

     ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌  ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರ ಅವರ ತಾಯಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

   ರಾಘವೇಂದ್ರ ಅಲಿಯಾಸ್‌ ರಘು ತಾಯಿ ಮಂಜುಳಮ್ಮ (75) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ರಾಘವೇಂದ್ರನ ತಾಯಿ ಕೋಳಿ ಬುರುಜನಹಟ್ಟಿ ಮನೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಮಂಜುಳಮ್ಮ ಅವರು ರಾಘವೇಂದ್ರ ಅವರ ಸಹೋದರ ಮುರಳಿ ಎಂಬುವವರ ಮನೆಯಲ್ಲಿದ್ದರು. ಮುರುಳಿ ಮದುವೆಯಾಗದೇ ತಾಯಿ ಆರೈಕೆ ಮಾಡುತಿದ್ದ. ರಘು ಲವ್ ಮ್ಯಾರೇಜ್ ಆಗಿ ಪತ್ನಿ ಜೊತೆ ಪ್ರತ್ಯೇಕವಾಗಿ ವಾಸವಾಗಿದ್ದ‌. ಆಗಾಗ್ಗೆ ಆಗಮಿಸಿ ತಾಯಿ ಆರೋಗ್ಯ ವಿಚಾರಿಸುತ್ತಿದ್ದ ಎಂದು ತಿಳಿದುಬಂದಿದೆ.

   ರಾಘವೇಂದ್ರ ಚಿತ್ರದುರ್ಗ ದರ್ಶನ್‌ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ.ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap