5ನೇ ದಿನದ ಕಲಾಪ ಜಗಳ ಗದ್ದಲದಲ್ಲಿ ಅಂತ್ಯ

ನವದೆಹಲಿ:

     ಸಂಸತ್ತು ಕಲಾಪ 5ನೇ ದಿನವೂ ಕಲಾಪದಲ್ಲಿ ಯಾವುದೇ ಫಲಪ್ರದ ಮಾತುಕತೆ, ಚರ್ಚೆಗಳು ನಡೆಯದೆ ವ್ಯರ್ಥವಾಗಿ ಮುಂದೂಡಲಾಗಿದೆ. 

    ಬಿಜೆಪಿ ವಿರುದ್ಧದ ಆರೋಪಗಳ ಬಗ್ಗೆ ಮಾತನಾಡಲು ಸದನದಲ್ಲಿ ಸಮಯಾವಕಾಶ ನೀಡುವಂತೆ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ನಿನ್ನೆ ಮನವಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದರು. 

    ಗೌತಮ್ ಅದಾನಿ ವಿಷಯದ ಕುರಿತು ಚರ್ಚೆ ಮತ್ತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದರೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ “ಪ್ರಜಾಪ್ರಭುತ್ವ-ಬೆದರಿಕೆ” ಹೇಳಿಕೆಗಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.  ರಾಹುಲ್ ಗಾಂಧಿಯವರು ಲಂಡನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಟೀಕಾಪ್ರಹಾರ, ವಾಕ್ಸಮರ ಸದನದಲ್ಲಿ ಮುಂದುವರಿಯುತ್ತಲೇ ಇದೆ.

    ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಲು ಯತ್ನಿಸಿದರಾದರೂ ಅವಕಾಶ ಸಿಗದ ಕಾರಣ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದರು. ಆಡಳಿತ ಪಕ್ಷದ ಸದಸ್ಯರೂ ಪ್ರತಿಭಟನೆಗೆ ನಿಂತರು.

     ಖರ್ಗೆ ಅವರು ಪ್ರಸ್ತಾಪಿಸಿದ ಆದೇಶವನ್ನು ಕೈಗೆತ್ತಿಕೊಂಡ ಸಭಾಪತಿಗಳು, ಮಾರ್ಚ್ 13 ಮತ್ತು 14 ರಂದು ಅವರು ಮಾಡಿದ ಪ್ರತಿಪಾದನೆಗಳನ್ನು ದೃಢೀಕರಿಸುವಂತೆ ಸಭಾನಾಯಕ ಪಿಯೂಷ್ ಗೋಯಲ್ ಅವರಿಗೆ ಸೂಚಿಸಿದರು.

     “ಪ್ರತಿಪಕ್ಷದ ನಾಯಕರು ಪ್ರಸ್ತಾಪಿಸಿದ ಆದೇಶಕ್ಕೆ ಸಂಬಂಧಿಸಿದಂತೆ, ದಿನದ ಅವಧಿಯಲ್ಲಿ ಈ ವಿಷಯದ ಕುರಿತು ಮಾರ್ಚ್ 13 ಮತ್ತು 14 ರಂದು ಅವರು ಮಾಡಿದ ಸಮರ್ಥನೆಗಳನ್ನು ದೃಢೀಕರಿಸಲು ಸದನದ ನಾಯಕನಿಗೆ ನಿರ್ದೇಶಿಸುವುದು ಸೂಕ್ತವೆಂದು ನಾನು ಭಾವಿಸುತ್ತೇನೆ” ಎಂದು ಸಭಾಪತಿ ಧನ್ ಕರ್ ಹೇಳಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap