ಕೋರ್ಟ್ ಮೊರೆ ಹೋದಂತ 6 ವಿದ್ಯಾರ್ಥಿನಿಯರು ಕಾಲೇಜಿಗೆ ಗೈರು 

ಉಡುಪಿ:

    ರಾಜ್ಯಾಧ್ಯಂತ ಇಂದಿನಿಂದ ಪಿಯು, ಪದವಿ ಕಾಲೇಜುಗಳು  ಆರಂಭಗೊಂಡಿವೆ. ಇತ್ತ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆಯ ಜೊತೆಗೆ ಕಾಲೇಜುಗಳು ಆರಂಭಗೊಂಡಿವೆ.

  ಆದ್ರೇ ಇಂದು ಆರಂಭಗೊಂಡಿರುವಂತ ಕಾಲೇಜಿಗೆ ಹೈಕೋರ್ಟ್ ನಲ್ಲಿ  ಹಿಜಾಬ್ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವಂತ 6 ವಿದ್ಯಾರ್ಥಿನಿಯರು ಗೈರು ಹಾಜರಾಗಿರೋದಾಗಿ ತಿಳಿದು ಬಂದಿದೆ.

ಹಿಜಾಬ್ ವರ್ಸಸ್ ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು, ಉಡುಪಿ ಜಿಲ್ಲೆಯಲ್ಲಾಗಿತ್ತು. ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಂತ ತ್ರಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಇಂದು ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆ ಮತ್ತೆ ಪುನರಾರಂಭಗೊಳ್ಳಲಿದೆ.

ಈ ನಡುವೆ ಇಂದು ಆರಂಭಗೊಂಡಿರುವಂತ ಪಿಯು ಕಾಲೇಜಿಗೆ ಹೈಕೋರ್ಟ್ ನಲ್ಲಿ ಹಿಜಾಬ್ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವಂತ 6 ವಿದ್ಯಾರ್ಥಿನಿಯರು ಹಾಜರಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ.

ಈ ಮೂಲಕ ಹಿಜಾಬ್ ಅನುಮತಿ ಕೋರಿದಂತ ವಿದ್ಯಾರ್ಥಿನಿಯರು ಪಿಯು ಕಾಲೇಜು ತರಗತಿಗೆ ಗೈರು ಹಾಜರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap