ಒಡಿಶಾ ದೋಣಿ ದುರಂತ : 7 ಮಂದಿ ನಾಪತ್ತೆ

ಜಾರ್ಸುಗುಡಾ: 

   ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಮಹಾನದಿ ನದಿಯಲ್ಲಿ ದೋಣಿಯೊಂದು ಮುಳುಗಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

   ನೆರೆಯ ಛತ್ತೀಸ್‌ಗಢದ ಖಾರ್ಸಿಯಾ ಪ್ರದೇಶದ ಸುಮಾರು 50 ಪ್ರಯಾಣಿಕರು ಒಡಿಶಾದ ಬರ್ಗಢ್ ಜಿಲ್ಲೆಯ ಪಥರ್ಸೇನಿ ಕುಡಾದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ ದೋಣಿಯಲ್ಲಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

    ನಾಪತ್ತೆಯಾದವರಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳಿದ್ದಾರೆ. ಎಲ್ಲರೂ ಪತ್ತೆ ಯಾಗುವವರೆಗೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಉತ್ತರ ರೇಂಜ್ ಐಜಿ ಹಿಮಾಂಶು ಲಾಲ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap