ದೇಶದಾದ್ಯಂದ 75ನೇ ಗಣರಾಜ್ಯೋತ್ಸವ ಸಂಭ್ರಮ……!

ನವದೆಹಲಿ: 

      ದೇಶದಾದ್ಯಂದ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

     ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು.

     ಸಂವಿಧಾನದ ರಚನೆಗೆ 2 ವರ್ಷ, 11 ತಿಂಗಳು, 17 ದಿನಗಳು ಬೇಕಾಯಿತು. ಭಾರತದ ಸಂವಿಧಾನ ಸಂಪೂರ್ಣ ಲಿಖಿತವಾಗಿದ್ದು, ಅದರಲ್ಲಿ 22 ಅಧ್ಯಾಯಗಳು ಮತ್ತು 395 ಅನುಚ್ಛೇದಗಳಿವೆ. ಭಾರತದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನ ಪರಮೋಚ್ಛವಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂತೆಯೇ ಜನವರಿ 26ರ ದಿನವನ್ನು ಗಣರಾಜ್ಯ ದಿನವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತದೆ. ಭಾರತವು ತನ್ನ 75ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸಿಕೊಳ್ಳುತ್ತಿದೆ. ಗಣರಾಜ್ಯೋತ್ಸವ ಒಟ್ಟು ಮೂರು ದಿನಗಳ ಕಾಲ ನಡೆಯಲಿದ್ದು, ಜನವರಿ 29ರಂದು ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಕೊನೆಗೊಳ್ಳುತ್ತದೆ.

ಜ.26 ಅನ್ನು ಗಣರಾಜ್ಯ ದಿನ ಎಂದು ಏಕೆ ಗುರುತಿಸಲಾಗಿದೆ?
ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ‍್ಯ ಗಳಿಸಿತು. ಸಂವಿಧಾನವನ್ನು ನವೆಂಬರ್ 26, 1949 ರಂದು ಸಂವಿಧಾನ ಸಭೆಯು ಅಂಗೀಕರಿಸಿತು ಮತ್ತು ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಈ ದಿನದಂದು ರಾಷ್ಟ್ರಧ್ವಜವನ್ನು ಹಾರಿಸಿದರು. ಭಾರತದ ಗಣರಾಜ್ಯೋತ್ಸವ ಎಂದು ಗುರುತಿಸಲ್ಪಟ್ಟ ನಂತರ ಈ ದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲಾಯಿತು.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಏನಾಗುತ್ತದೆ?
ಪ್ರತಿ ವರ್ಷ, ದಿನವನ್ನು ಗುರುತಿಸುವ ಆಚರಣೆಗಳು ಅದ್ಭುತವಾದ ಮಿಲಿಟರಿ ಮತ್ತು ಸಾಂಸ್ಕೃತಿಕ ಪ್ರದರ್ಶನವನ್ನು ಒಳಗೊಂಡಿರುತ್ತವೆ. ನಮ್ಮ ಶ್ರೀಮಂತ ಸಾಂಸ್ಕೃತಿಕ ಮತ್ತು ಮಿಲಿಟರಿ ಪರಂಪರೆಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರದರ್ಶಿಸಲಾಗುತ್ತದೆ. ಇದರಲ್ಲಿ ಇತರ ದೇಶಗಳ ಗೌರವಾನ್ವಿತ ಗಣ್ಯರು, ಭಾರತೀಯ ರಾಜಕಾರಣಿಗಳು ಮತ್ತು ಸಾರ್ವಜನಿಕರು ಭಾಗವಹಿಸುತ್ತಾರೆ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರ್ಣರಂಜಿತ ಕೋಷ್ಟಕಗಳ ಮೂಲಕ ಇತರ ವಿಷಯಗಳ ಜೊತೆಗೆ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸುತ್ತವೆ. ಅಲ್ಲದೇ ವಿವಿಧ ರಾಜ್ಯಗಳ ಟ್ಯಾಬ್ಲೋ ಪ್ರದರ್ಶನ ನಡೆಯುತ್ತದೆ. ಕರ್ತವ್ಯ ಪಥದಲ್ಲಿ ಪಥ ಸಂಚಲನ ನಡೆಯಲಿದೆ.
ಗಣರಾಜ್ಯೋತ್ಸವ 2024ರ ಮುಖ್ಯ ಅತಿಥಿ ಯಾರು?
ಭಾರತದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಆಹ್ವಾನಿಸಲಾಗಿದ್ದು, ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಮ್ಯಾಕ್ರನ್ ಆಗಮಿಸಿದ್ದಾರೆ. ಕಳೆದ ವರ್ಷ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಮುಖ್ಯ ಅತಿಥಿಯಾಗಿದ್ದರು.
ಗಣರಾಜ್ಯೋತ್ಸವ 2024ರ ಥೀಮ್ ಏನು?
    2024ರ ಗಣರಾಜ್ಯೋತ್ಸವದ ಥೀಮ್ ‘ಭಾರತ – ಪ್ರಜಾಪ್ರಭುತ್ವದ ತಾಯಿ’ ಮತ್ತು “ವಿಕಸಿತ ಭಾರತ” ಆಗಿದೆ.

     ವಿಪರ್ಯಾಸವೆಂದರೆ ಇಡೀ ದೇಶಕ್ಕೆ ತಂತ್ರಜ್ಞಾನ , ಕಲೆ , ಸಸ್ಯ ಸಂಪದ ಹಾಗೂ ಚಾರಿತ್ರಾತ್ಮಕವಾಗಿ ಪ್ರಮುಖವೆನ್ನಿಸುವಂತಹ ರಾಜ್ಯಗಳಲ್ಲಿ ಅಗ್ರಗಣ್ಯವಾಗಿರುವ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ದೆಹಲಿ ಪರೇಡ್‌ ನಲ್ಲಿ ಅವಕಾಶ ಸಿಗದೆ ಇರುವುದು ಅತ್ಯಂತ ನೋವಿನ ಸಂಗತಿ ಹಾಗೂ ದೇಶದ ಸಾಂಸ್ಕೃತಿಕ ಏಕತೆಗೆ ಇದು ಶೋಭೆಯನ್ನು ತರುವುದಿಲ್ಲ ಎನ್ನುವುದು ಕರ್ನಾಟಕದ ಜನರ ಮನದಾಳದ ಮಾತು .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap