8 ಜಿಲ್ಲಾಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಒಟ್ಟು 8 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದರಲ್ಲಿ ಒಟ್ಟು 8 ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಯಾರು ಎಲ್ಲಿಗೆ ವರ್ಗಾವಣೆ ಆಗಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಜಿಲ್ಲಾಧಿಕಾರಿಗಳ ವರ್ಗಾವಣೆಯ ವಿವರ : 
  • ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ವರ್ಗಾಯಿಸಿಸಲಾಗಿದೆ.
  • ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ಐಎಎಸ್ (ಕೆ.ಎನ್: 2010) ಅವರನ್ನುಮುಂದಿನ ಆದೇಶದವರೆಗೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ.
  • ಸುಂದರೇಶಬಾಬು ಎಂ., ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಗದಗ ಜಿಲ್ಲೆ, ಇವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್,ಗೆ ನೇಮಕ ಮಾಡಲಾಗಿದೆ.
  • ಸುರಳ್ಕರ್ ವಿಕಾಸ್ ಕಿಶೋರ್, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ , ಇವರನ್ನು ಮುಂದಿನ ಆದೇಶದವರೆಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
  • ಹೊನ್ನಾಂಬ, ಐಎಎಸ್ (ಕೆ.ಎನ್: 2012), ಕಾರ್ಯದರ್ಶಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಬೆಂಗಳೂರು ಇವರನ್ನು ಜಿಲ್ಲಾಧಿಕಾರಿ, ಗದಗ ಜಿಲ್ಲೆಗೆ ವರ್ಗಾವಣೆ ಮಡಲಾಗಿದೆ.
  • ಆರ್.ಲತಾ, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ, ಅವರನ್ನು ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
  • ಲೋಖಂಡೆ ಸ್ನೇಹಲ್ ಸುಧಾಕರ್, ಐಎಎಸ್ (ಕೆ.ಎನ್: 2017) ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಉಪ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.
  • ಶಿವಾನಂದ ಕಾಪಶಿ, ಐಎಎಸ್ (ಕೆಎನ್: 2012), ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲೆ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ದಾವಣಗೆರೆ ವೈಸ್ ಶ್ರೀ ಮಹಾಂತೇಶ ಬಿಳಗಿ, ಐಎಎಸ್ ವರ್ಗಾವಣೆ ಮಾಡಿದ್ದಾರೆ.

Recent Articles

spot_img

Related Stories

Share via
Copy link