ಪ್ರವಾಹದಲ್ಲಿ ಸತ್ತವರ ಕುಟುಂಬಕ್ಕೆ 5 ಲಕ್ಷ ಪರಿಹಾರ!!

ಬೆಳಗಾವಿ :

       ಮಳೆಯಿಂದ ಮೃತಪಟ್ಟವರ ಕುಟುಂಬವರಿಗೆ ತಕ್ಷಣ 5 ಲಕ್ಷ ರೂ. ನೀಡುವಂತೆ ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

       ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ ಅವರು, ಬುಧವಾರ ರಾತ್ರಿ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರದ ಭರವಸೆ ನೀಡಿದ್ದಾರೆ. ನಿರಂತರ ಮಳೆಗೆ ಕೃಷ್ಣಾ, ಘಟಪ್ರಭಾ ಹಾಗೂ ಮಾರ್ಕೆಂಡೇಯ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುರುವಾರ ಬೆಳಗಾವಿಗೆ ಎನ್ ಡಿಆರ್ ಎಫ್ ಮತ್ತು ಸೇನೆಯ ತಲಾ ನಾಲ್ಕು ತಂಡಗಳು ಹಾಗೂ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಗಳು ಆಗಮಿಸಲಿವೆ ಎಂದು ಮಾಹಿತಿ ನೀಡಿದರು.

      ಇನ್ನು ಕರ್ನಾಟಕದಲ್ಲಿನ ಪ್ರವಾಹ ಬಗ್ಗೆ ಈಗಾಗಲೇ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತನಾಡಿದ್ದೇನೆ. ಇಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಪರಿಹಾರ ಕೇಂದ್ರಗಳಿಗೆ ನಾನೇ ಖುದ್ದು ಭೇಟಿ ನೀಡುತ್ತೇನೆ. ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ. ಆ. 10 ರಂದು ಅಗತ್ಯವಿದ್ದರೆ ಎಲ್ಲ ಕಾರ್ಯಕ್ರಮ ರದ್ದು ಮಾಡುತ್ತೇನೆ. ಪರಿಹಾರ ಕೇಂದ್ರದಲ್ಲಿ ಸಮಸ್ಯೆಗಳಾದರೆ ಅಧಿಕಾರಿಗಳೇ ಹೊಣೆ ಎಂದು ಬಿಎಸ್ ವೈ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link