ನವದೆಹಲಿ:
ಇಂದು ಇಡೀ ರಾಷ್ಟ್ರವೇ ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೊವಿಂದ್ ಅವರು, “ಭಾರತ ಮತ್ತು ವಿದೇಶದಲ್ಲಿರುವ ನಮ್ಮ ಎಲ್ಲಾ ಮುಸ್ಲಿಂ ಸಹೋದರ, ಸಹೋದರಿಯರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯತೆಯನ್ನು ಸಂಕೇತಿಸುತ್ತದೆ. ನಮ್ಮ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗೋಣ” ಎಂದು ತಿಳಿಸಿದ್ದಾರೆ
Eid Mubarak to all fellow citizens, especially to our Muslim brothers & sisters in India and abroad.
Idu'I Zuha symbolizes love, fraternity and service to humanity. Let us commit ourselves to these universal values that represent our composite culture #PresidentKovind
— President of India (@rashtrapatibhvn) August 12, 2019
ಮೋದಿ ಸೋಮವಾರ ಬೆಳಗ್ಗೆ ಟ್ವೀಟ್ ಮಾಡಿದ್ದು, ತ್ಯಾಗ, ಬಲಿದಾನದ ಸಂಕೇತವಾದ ಈದ್-ಅಲ್-ಅಧಾದ ಸಂದರ್ಭದಲ್ಲಿ ನಾನು ಮುಸ್ಲಿಮರಿಗೆ ಶುಭ ಕೋರುತ್ತೇನೆ. ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ, ಈದ್ ಮುಬಾರಕ್ ಎಂದು ತಿಳಿಸಿದ್ದಾರೆ.
My best wishes on the occasion of Eid al-Adha. I hope it furthers the spirit of peace and happiness in our society. Eid Mubarak!
— Narendra Modi (@narendramodi) August 12, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








